ಬೆಳಗಾವಿ: ‘ಗೋಕಾಕ ತಾಲ್ಲೂಕಿನ ಬೆನಚಿನಮರಡಿ(ಕೊ) ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ನಿವಾಸ ಯೋಜನೆಯಡಿ ಭಾರಿ ಅವ್ಯವಹಾರ ನಡೆದಿದೆ. ಇದರಲ್ಲಿ ಭಾಗಿಯಾಗಿರುವ ಪಿಡಿಒ, ಕಾರ್ಯದರ್ಶಿ ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳ ಮೇಲೆ ಪ್ರಕರಣ ದಾಖಲಿಸಿ ಕ್ರಮಕೈಗೊಳ್ಳಬೇಕು’ ಎಂದು ವಕೀಲ, ಮಾಹಿತಿ ಹಕ್ಕು ಕಾರ್ಯಕರ್ತ ಸುರೇಂದ್ರ ಉಗಾರೆ ಒತ್ತಾಯಿಸಿದ್ದಾರೆ.