<p><strong>ಬೆಳಗಾವಿ</strong>: ಜಿಲ್ಲೆಯಲ್ಲಿ ನೀರಾವರಿ ಯೋಜನೆಗಳ ಅನುಷ್ಠಾನ ನಿಧಾನಗತಿಯಲ್ಲಿ ಸಾಗಿರುವುದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅಸಮಾಧಾನ ವ್ಯಕ್ತಪಡಿಸಿದರು.</p><p>ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕರ್ನಾಟಕ ನೀರಾವರಿ ನಿಗಮದ ಉತ್ತರ ವಲಯದ ಜಿಲ್ಲಾ ವ್ಯಾಪ್ತಿಯ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು.</p><p>‘ಜಿಲ್ಲೆಯಲ್ಲಿ ಹಲವು ಯೋಜನೆಗಳು ನಿಧಾನಗತಿಯಲ್ಲಿ ಸಾಗಿವೆ. ಹೊಸ ಯೋಜನೆಗಳು ಇನ್ನೂ ಆರಂಭವಾಗಿಲ್ಲ. ಯಾವುದೇ ನೀರಾವರಿ ಯೋಜನೆ 200 ಕಿ.ಮೀ.ವರೆಗಿನ ಅಗತ್ಯತೆ ಪೂರೈಸಬೇಕು. ಆ ಮಾದರಿಯಲ್ಲಿ ವಿನ್ಯಾಸ ಮಾಡಿ’ ಎಂದು ನಿರ್ದೇಶನ ನೀಡಿದರು.</p><p>‘ವಿವಿಧ ವಿಧಾನಸಭಾ ಕ್ಷೇತ್ರಗಳ ಬೇಡಿಕೆಗಳಿಗೆ ಅನುಗುಣವಾಗಿ ವಿನ್ಯಾಸಗೊಳಿಸಿದ ಯೋಜನೆಗಳು ಮತ್ತು ಪ್ರಗತಿಯಲ್ಲಿರುವ ಯೋಜನೆಗಳನ್ನು ಬೇಗ ಪೂರ್ಣಗೊಳಿಸದಿದ್ದರೆ, ಯಾವುದೇ ಉದ್ದೇಶ ಈಡೇರುವುದಿಲ್ಲ. ತ್ವರಿತವಾಗಿ ಯೋಜನೆಗಳನ್ನು ಪೂರ್ಣಗೊಳಿಸಿ’ ಎಂದು ಸೂಚಿಸಿದರು.</p><p>‘ಕೆರೆಗಳನ್ನು ತುಂಬಿಸುವ ಯೋಜನೆಗಳನ್ನು ಅನುಷ್ಠಾನಗೊಳಿಸುವಾಗ, ಕೆಳಭಾಗದ ಇತರೆ ಕೆರೆಗಳನ್ನು ತುಂಬಿಸಲು ಅನುಕೂಲವಾಗುವಂತೆ ಒಂದು ಕೆರೆ ಗುರುತಿಸಿ’ ಎಂದು ಹೇಳಿದರು.</p><p>ಕರ್ನಾಟಕ ನೀರಾವರಿ ನಿಗಮ ನಿಯಮಿತದ ಉತ್ತರ ವಲಯದ ಮುಖ್ಯ ಎಂಜಿನಿಯರ್ ಬಿ.ಆರ್.ರಾಠೋಡ ಅವರು, ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಹಾಗೂ ಕಾಮಗಾರಿ ಪೂರ್ಣಗೊಳಿಸಲು ಸರ್ಕಾರದಿಂದ ಹೆಚ್ಚಿನ ಸಮಯ ಕೇಳಿರುವ ಯೋಜನೆಗಳ ವಿವರ ನೀಡಿದರು.</p><p>ಶಾಸಕ ದುರ್ಯೋಧನ ಐಹೊಳೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಇತರರಿದ್ದರು.</p>.<p><strong>‘5 ಸಾವಿರ ಕ್ಯೂಸೆಕ್ ಬಿಡುಗಡೆ’</strong></p><p>‘ಗರಿಷ್ಠ 51 ಟಿಎಂಸಿ ಅಡಿ ಸಂಗ್ರಹ ಸಾಮರ್ಥ್ಯದ ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಜಲಾಶಯದಲ್ಲಿ ಜುಲೈ 8ರಂದು 41.90 ಟಿಎಂಸಿ ಅಡಿ (ಶೇ 82.16) ಸಂಗ್ರಹವಾಗಿದೆ. 20,032 ಕ್ಯೂಸೆಕ್ ಒಳಹರಿವು ಇದ್ದು, ಜಲಾಶಯ ಭರ್ತಿಯಾಗುವತ್ತ ಸಾಗಿದೆ. ಮುನ್ನೆಚ್ಚರಿಕೆ ದೃಷ್ಟಿಯಿಂದ ಜುಲೈ 9ರಿಂದ ಜಲಾಶಯದಿಂದ 5 ಸಾವಿರ ಕ್ಯೂಸೆಕ್ ಹೊರಬಿಡಲಾಗುವುದು’ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p><p>‘ಬುಧವಾರದ ನಂತರ ಒಳಹರಿವಿನ ಪ್ರಮಾಣ ಹೆಚ್ಚುತ್ತ ಸಾಗಿದರೆ, ಜಲಾಶಯದಿಂದ ಹೆಚ್ಚಿನ ನೀರು ಹೊರಬಿಡಲಾಗುವುದು. ಒಳಹರಿವಿನ ಪ್ರಮಾಣ ಕುಸಿದರೆ, ಹೊರಹರಿವು ಇಳಿಸಲಾಗುವುದು’ ಎಂದರು.</p>.ಕಿರು ಉದ್ಯಮ ಸ್ಥಾಪಿಸಿ, ಆರ್ಥಿಕವಾಗಿ ಸಬಲರಾಗಿ: ಸಚಿವ ಸತೀಶ ಜಾರಕಿಹೊಳಿ ಕರೆ.ಗ್ರಾಹಕರ ಮನಸ್ಸನ್ನು ಗೆದ್ದರೆ ಮಾತ್ರ ಮುಂದೆ ಅಧಿಕಾರಕ್ಕೆ: ಸತೀಶ ಜಾರಕಿಹೊಳಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಜಿಲ್ಲೆಯಲ್ಲಿ ನೀರಾವರಿ ಯೋಜನೆಗಳ ಅನುಷ್ಠಾನ ನಿಧಾನಗತಿಯಲ್ಲಿ ಸಾಗಿರುವುದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅಸಮಾಧಾನ ವ್ಯಕ್ತಪಡಿಸಿದರು.</p><p>ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕರ್ನಾಟಕ ನೀರಾವರಿ ನಿಗಮದ ಉತ್ತರ ವಲಯದ ಜಿಲ್ಲಾ ವ್ಯಾಪ್ತಿಯ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು.</p><p>‘ಜಿಲ್ಲೆಯಲ್ಲಿ ಹಲವು ಯೋಜನೆಗಳು ನಿಧಾನಗತಿಯಲ್ಲಿ ಸಾಗಿವೆ. ಹೊಸ ಯೋಜನೆಗಳು ಇನ್ನೂ ಆರಂಭವಾಗಿಲ್ಲ. ಯಾವುದೇ ನೀರಾವರಿ ಯೋಜನೆ 200 ಕಿ.ಮೀ.ವರೆಗಿನ ಅಗತ್ಯತೆ ಪೂರೈಸಬೇಕು. ಆ ಮಾದರಿಯಲ್ಲಿ ವಿನ್ಯಾಸ ಮಾಡಿ’ ಎಂದು ನಿರ್ದೇಶನ ನೀಡಿದರು.</p><p>‘ವಿವಿಧ ವಿಧಾನಸಭಾ ಕ್ಷೇತ್ರಗಳ ಬೇಡಿಕೆಗಳಿಗೆ ಅನುಗುಣವಾಗಿ ವಿನ್ಯಾಸಗೊಳಿಸಿದ ಯೋಜನೆಗಳು ಮತ್ತು ಪ್ರಗತಿಯಲ್ಲಿರುವ ಯೋಜನೆಗಳನ್ನು ಬೇಗ ಪೂರ್ಣಗೊಳಿಸದಿದ್ದರೆ, ಯಾವುದೇ ಉದ್ದೇಶ ಈಡೇರುವುದಿಲ್ಲ. ತ್ವರಿತವಾಗಿ ಯೋಜನೆಗಳನ್ನು ಪೂರ್ಣಗೊಳಿಸಿ’ ಎಂದು ಸೂಚಿಸಿದರು.</p><p>‘ಕೆರೆಗಳನ್ನು ತುಂಬಿಸುವ ಯೋಜನೆಗಳನ್ನು ಅನುಷ್ಠಾನಗೊಳಿಸುವಾಗ, ಕೆಳಭಾಗದ ಇತರೆ ಕೆರೆಗಳನ್ನು ತುಂಬಿಸಲು ಅನುಕೂಲವಾಗುವಂತೆ ಒಂದು ಕೆರೆ ಗುರುತಿಸಿ’ ಎಂದು ಹೇಳಿದರು.</p><p>ಕರ್ನಾಟಕ ನೀರಾವರಿ ನಿಗಮ ನಿಯಮಿತದ ಉತ್ತರ ವಲಯದ ಮುಖ್ಯ ಎಂಜಿನಿಯರ್ ಬಿ.ಆರ್.ರಾಠೋಡ ಅವರು, ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಹಾಗೂ ಕಾಮಗಾರಿ ಪೂರ್ಣಗೊಳಿಸಲು ಸರ್ಕಾರದಿಂದ ಹೆಚ್ಚಿನ ಸಮಯ ಕೇಳಿರುವ ಯೋಜನೆಗಳ ವಿವರ ನೀಡಿದರು.</p><p>ಶಾಸಕ ದುರ್ಯೋಧನ ಐಹೊಳೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಇತರರಿದ್ದರು.</p>.<p><strong>‘5 ಸಾವಿರ ಕ್ಯೂಸೆಕ್ ಬಿಡುಗಡೆ’</strong></p><p>‘ಗರಿಷ್ಠ 51 ಟಿಎಂಸಿ ಅಡಿ ಸಂಗ್ರಹ ಸಾಮರ್ಥ್ಯದ ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಜಲಾಶಯದಲ್ಲಿ ಜುಲೈ 8ರಂದು 41.90 ಟಿಎಂಸಿ ಅಡಿ (ಶೇ 82.16) ಸಂಗ್ರಹವಾಗಿದೆ. 20,032 ಕ್ಯೂಸೆಕ್ ಒಳಹರಿವು ಇದ್ದು, ಜಲಾಶಯ ಭರ್ತಿಯಾಗುವತ್ತ ಸಾಗಿದೆ. ಮುನ್ನೆಚ್ಚರಿಕೆ ದೃಷ್ಟಿಯಿಂದ ಜುಲೈ 9ರಿಂದ ಜಲಾಶಯದಿಂದ 5 ಸಾವಿರ ಕ್ಯೂಸೆಕ್ ಹೊರಬಿಡಲಾಗುವುದು’ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p><p>‘ಬುಧವಾರದ ನಂತರ ಒಳಹರಿವಿನ ಪ್ರಮಾಣ ಹೆಚ್ಚುತ್ತ ಸಾಗಿದರೆ, ಜಲಾಶಯದಿಂದ ಹೆಚ್ಚಿನ ನೀರು ಹೊರಬಿಡಲಾಗುವುದು. ಒಳಹರಿವಿನ ಪ್ರಮಾಣ ಕುಸಿದರೆ, ಹೊರಹರಿವು ಇಳಿಸಲಾಗುವುದು’ ಎಂದರು.</p>.ಕಿರು ಉದ್ಯಮ ಸ್ಥಾಪಿಸಿ, ಆರ್ಥಿಕವಾಗಿ ಸಬಲರಾಗಿ: ಸಚಿವ ಸತೀಶ ಜಾರಕಿಹೊಳಿ ಕರೆ.ಗ್ರಾಹಕರ ಮನಸ್ಸನ್ನು ಗೆದ್ದರೆ ಮಾತ್ರ ಮುಂದೆ ಅಧಿಕಾರಕ್ಕೆ: ಸತೀಶ ಜಾರಕಿಹೊಳಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>