<p><strong>ಹುಕ್ಕೇರಿ</strong>: ತಾಲ್ಲೂಕಿನ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ತಮ್ಮ ಕಾರ್ಯದಕ್ಷತೆ ಮೂಲಕ ವ್ಯವಸ್ಥಾಪಕ ನಿರ್ದೇಶಕರಾಗಿ ನಿವೃತ್ತಿ ಹೊಂದುತ್ತಿರುವ ಸಾತಪ್ಪ ಕರ್ಕಿನಾಯಿಕ ಅವರು ರೈತನ ಮಗ ಕಾರ್ಖಾನೆ ಎಂಡಿ ಆಗಿದ್ದು ಶ್ಲಾಘನೀಯ ಎಂದು ಕಾರ್ಖಾನೆ ಉಪಾಧ್ಯಕ್ಷ ಅಶೋಕ ಪಟ್ಟಣಶೆಟ್ಟಿ ಹೇಳಿದರು.</p>.<p>ಶನಿವಾರ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಸಾತಪ್ಪ ಕರ್ಕಿನಾಯಿಕ ಸೇವಾ ನಿವೃತ್ತರಾದ ಅಂಗವಾಗಿ ಆಡಳಿತ ಮಂಡಳಿ ಪರವಾಗಿ ಅವರನ್ನು ಸನ್ಮಾನಿಸಿ ಮಾತನಾಡಿದರು.</p>.<p> ನಿರ್ದೇಶಕ ಶಿವನಾಯಿಕ ನಾಯಿಕ ಮಾತನಾಡಿ, ಬಸವ ತತ್ವದ ಅನುಯಾಯಿ ಎಸ್.ಆರ್. ಕರ್ಕಿನಾಯಿಕ ಕಾಯಕದ ಮೂಲಕ ಕಾರ್ಖಾನೆಯ ಪ್ರಗತಿಗೆ ಸೇವೆ ಸಲ್ಲಿಸಿದ್ದು ಸ್ಮರಣೀಯ ಎಂದರು. ನಿರ್ದೇಶಕ ಬಾಬಾಸಾಹೇಬ ಅರಬೋಳೆ ಮಾತನಾಡಿದರು.</p>.<p>ಸತ್ಕಾರ ಸ್ವೀಕರಿಸಿ ಮಾತನಾಡಿದ ಸಾತಪ್ಪ ಕರ್ಕಿನಾಯಿಕ, ವಿವಿಧ ಹುದ್ದೆಗಳಲ್ಲಿ 28 ವರ್ಷ ಕಾರ್ಯನಿರ್ವಹಿಸಿದ್ದ ನನಗೆ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯಲ್ಲಿ ಕಾರ್ಯನಿರ್ವಹಿಸುವ ಅವಕಾಶ ಒದಗಿ ಬಂದಿದ್ದು ನನ್ನ ಸೌಭಾಗ್ಯ. ಸಹಕರಿಸಿದ ಎಲ್ಲರಿಗೂ ಧನ್ಯವಾದ ಎಂದರು.<br> ಇದೇ ಸಂದರ್ಭದಲ್ಲಿ ವಿವಿಧ ವಿಭಾಗಗಳಲ್ಲಿ ಸೇವಾ ನಿವೃತ್ತಿ ಹೊಂದಿದ 11 ಜನ ಸಿಬ್ಬಂದಿಯನ್ನು ಸತ್ಕರಿಸಲಾಯಿತು.</p>.<p>ಅಧ್ಯಕ್ಷ ಬಸವರಾಜ ಕಲ್ಲಟ್ಟಿ, ನಿರ್ದೇಶಕರಾದ ಬಸವರಾಜ ಮರಡಿ, ಪ್ರಭುದೇವ ಪಾಟೀಲ, ಸುರೇಂದ್ರ ದೊಡಲಿಂಗನವರ, ಜನರಲ್ ಮ್ಯಾನೇಜರ ವೀರನಗೌಡ ದೇಸಾಯಿ, ಕಾರ್ಮಿಕ ಸಂಘಟನೆ ಅಧ್ಯಕ್ಷ ಮೋಹನ ಕೋಠಿವಾಲೆ, ಆಡಳಿತಾಧಿಕಾರಿ ರವೀಂದ್ರ ಚೌಗಲಾ ಸೇರಿದಂತೆ ವಿವಿಧ ಗ್ರಾಮಗಳ ರೈತರು ಇದ್ದರು.</p>.<p>ಎಂ.ಪಿ.ದೇಸಾಯಿ ಸ್ವಾಗತಿಸಿದರು. ಲಕ್ಷ್ಮಣ ಹಂಚಿನಮನಿ ನಿರೂಪಿಸಿದರು. ಕಚೇರಿ ಅಧೀಕ್ಷಕ ಸುಭಾಷ ನಾಶಿಪುಡಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಕ್ಕೇರಿ</strong>: ತಾಲ್ಲೂಕಿನ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ತಮ್ಮ ಕಾರ್ಯದಕ್ಷತೆ ಮೂಲಕ ವ್ಯವಸ್ಥಾಪಕ ನಿರ್ದೇಶಕರಾಗಿ ನಿವೃತ್ತಿ ಹೊಂದುತ್ತಿರುವ ಸಾತಪ್ಪ ಕರ್ಕಿನಾಯಿಕ ಅವರು ರೈತನ ಮಗ ಕಾರ್ಖಾನೆ ಎಂಡಿ ಆಗಿದ್ದು ಶ್ಲಾಘನೀಯ ಎಂದು ಕಾರ್ಖಾನೆ ಉಪಾಧ್ಯಕ್ಷ ಅಶೋಕ ಪಟ್ಟಣಶೆಟ್ಟಿ ಹೇಳಿದರು.</p>.<p>ಶನಿವಾರ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಸಾತಪ್ಪ ಕರ್ಕಿನಾಯಿಕ ಸೇವಾ ನಿವೃತ್ತರಾದ ಅಂಗವಾಗಿ ಆಡಳಿತ ಮಂಡಳಿ ಪರವಾಗಿ ಅವರನ್ನು ಸನ್ಮಾನಿಸಿ ಮಾತನಾಡಿದರು.</p>.<p> ನಿರ್ದೇಶಕ ಶಿವನಾಯಿಕ ನಾಯಿಕ ಮಾತನಾಡಿ, ಬಸವ ತತ್ವದ ಅನುಯಾಯಿ ಎಸ್.ಆರ್. ಕರ್ಕಿನಾಯಿಕ ಕಾಯಕದ ಮೂಲಕ ಕಾರ್ಖಾನೆಯ ಪ್ರಗತಿಗೆ ಸೇವೆ ಸಲ್ಲಿಸಿದ್ದು ಸ್ಮರಣೀಯ ಎಂದರು. ನಿರ್ದೇಶಕ ಬಾಬಾಸಾಹೇಬ ಅರಬೋಳೆ ಮಾತನಾಡಿದರು.</p>.<p>ಸತ್ಕಾರ ಸ್ವೀಕರಿಸಿ ಮಾತನಾಡಿದ ಸಾತಪ್ಪ ಕರ್ಕಿನಾಯಿಕ, ವಿವಿಧ ಹುದ್ದೆಗಳಲ್ಲಿ 28 ವರ್ಷ ಕಾರ್ಯನಿರ್ವಹಿಸಿದ್ದ ನನಗೆ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯಲ್ಲಿ ಕಾರ್ಯನಿರ್ವಹಿಸುವ ಅವಕಾಶ ಒದಗಿ ಬಂದಿದ್ದು ನನ್ನ ಸೌಭಾಗ್ಯ. ಸಹಕರಿಸಿದ ಎಲ್ಲರಿಗೂ ಧನ್ಯವಾದ ಎಂದರು.<br> ಇದೇ ಸಂದರ್ಭದಲ್ಲಿ ವಿವಿಧ ವಿಭಾಗಗಳಲ್ಲಿ ಸೇವಾ ನಿವೃತ್ತಿ ಹೊಂದಿದ 11 ಜನ ಸಿಬ್ಬಂದಿಯನ್ನು ಸತ್ಕರಿಸಲಾಯಿತು.</p>.<p>ಅಧ್ಯಕ್ಷ ಬಸವರಾಜ ಕಲ್ಲಟ್ಟಿ, ನಿರ್ದೇಶಕರಾದ ಬಸವರಾಜ ಮರಡಿ, ಪ್ರಭುದೇವ ಪಾಟೀಲ, ಸುರೇಂದ್ರ ದೊಡಲಿಂಗನವರ, ಜನರಲ್ ಮ್ಯಾನೇಜರ ವೀರನಗೌಡ ದೇಸಾಯಿ, ಕಾರ್ಮಿಕ ಸಂಘಟನೆ ಅಧ್ಯಕ್ಷ ಮೋಹನ ಕೋಠಿವಾಲೆ, ಆಡಳಿತಾಧಿಕಾರಿ ರವೀಂದ್ರ ಚೌಗಲಾ ಸೇರಿದಂತೆ ವಿವಿಧ ಗ್ರಾಮಗಳ ರೈತರು ಇದ್ದರು.</p>.<p>ಎಂ.ಪಿ.ದೇಸಾಯಿ ಸ್ವಾಗತಿಸಿದರು. ಲಕ್ಷ್ಮಣ ಹಂಚಿನಮನಿ ನಿರೂಪಿಸಿದರು. ಕಚೇರಿ ಅಧೀಕ್ಷಕ ಸುಭಾಷ ನಾಶಿಪುಡಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>