<p><strong>ಬೆಳಗಾವಿ:</strong> ‘ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಮ್ಮನ್ನು ಡಿ ದರ್ಜೆ ನೌಕರರೆಂದು ಪರಿಗಣಿಸಬೇಕು ಹಾಗೂ ಸೇವಾಗುತ್ತಿಗೆ ಆದೇಶ ರದ್ದುಪಡಿಸಬೇಕು’ ಎಂದು ಆಗ್ರಹಿಸಿ ಜಾಡಮಾಲಿ (ಸ್ವೀಪರ್ಗಳು)ಗಳು ಬುಧವಾರ ಸುವರ್ಣ ವಿಧಾನಸೌಧದ ಬಳಿಯ ಸುವರ್ಣ ಗಾರ್ಡನ್ನಲ್ಲಿ ಪೊರಕೆಗಳನ್ನು ಪ್ರದರ್ಶಿಸಿ ಧರಣಿ ನಡೆಸಿದರು.</p>.<p>‘ಪೊಲೀಸ್ ಇಲಾಖೆ ಕಚೇರಿಗಳು ಹಾಗೂ ಠಾಣೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 904 ಜಾಡಮಾಲಿಗಳನ್ನು ವಜಾಗೊಳಿಸಿ ಆದೇಶ ಹೊರಡಿಸಿರುವುದರಿಂದ ಅವರು ಹಾಗೂ ಕುಟುಂಬದವರ ಬದುಕು ಅತಂತ್ರವಾಗಿದೆ. ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದವರು ಸಂಪೂರ್ಣ ಸೇವಾ ಭದ್ರತೆಯನ್ನು ಕಳೆದುಕೊಂಡಿದ್ದಾರೆ. ಸರ್ಕಾರವು ನಮ್ಮನ್ನು ಎಂದು ಕಾಯಂ ಮಾಡುತ್ತದೆ ಎಂದು ಚಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ’ ಎಂದು ತಿಳಿಸಿದರು.</p>.<p>‘ಸುಪ್ರೀಂ ಕೋರ್ಟ್ ಕೂಡ ನಮ್ಮಂಥ ನೌಕರರ ಪರವಾಗಿಯೇ ಇದೆ. ಆದರೆ, ಈ ತೀರ್ಪಿಗೆ ವಿರುದ್ಧವಾಗಿ ಸರ್ಕಾರವು ನಡೆದುಕೊಳ್ಳುತ್ತಿದೆ. ಜೀತಪದ್ಧತಿ ಪ್ರೋತ್ಸಾಹಿಸುವ ದಮನಕಾರಿ ಧೋರಣೆಯನ್ನು ತಾಳುವುದು ಸರಿಯಲ್ಲ. ಹೀಗಾಗಿ ಸರ್ಕಾರವು ವಜಾ ಆದೇಶ ರದ್ದುಗೊಳಿಸಬೇಕು. ನಮ್ಮನ್ನು ಕಾಯಂಗೊಳಿಸಬೇಕು. ಇತರ ನೌಕರರಿಗೆ ದೊರೆಯುವ ಸೌಲಭ್ಯಗಳನ್ನು ಕಲ್ಪಿಸಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಮ್ಮನ್ನು ಡಿ ದರ್ಜೆ ನೌಕರರೆಂದು ಪರಿಗಣಿಸಬೇಕು ಹಾಗೂ ಸೇವಾಗುತ್ತಿಗೆ ಆದೇಶ ರದ್ದುಪಡಿಸಬೇಕು’ ಎಂದು ಆಗ್ರಹಿಸಿ ಜಾಡಮಾಲಿ (ಸ್ವೀಪರ್ಗಳು)ಗಳು ಬುಧವಾರ ಸುವರ್ಣ ವಿಧಾನಸೌಧದ ಬಳಿಯ ಸುವರ್ಣ ಗಾರ್ಡನ್ನಲ್ಲಿ ಪೊರಕೆಗಳನ್ನು ಪ್ರದರ್ಶಿಸಿ ಧರಣಿ ನಡೆಸಿದರು.</p>.<p>‘ಪೊಲೀಸ್ ಇಲಾಖೆ ಕಚೇರಿಗಳು ಹಾಗೂ ಠಾಣೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 904 ಜಾಡಮಾಲಿಗಳನ್ನು ವಜಾಗೊಳಿಸಿ ಆದೇಶ ಹೊರಡಿಸಿರುವುದರಿಂದ ಅವರು ಹಾಗೂ ಕುಟುಂಬದವರ ಬದುಕು ಅತಂತ್ರವಾಗಿದೆ. ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದವರು ಸಂಪೂರ್ಣ ಸೇವಾ ಭದ್ರತೆಯನ್ನು ಕಳೆದುಕೊಂಡಿದ್ದಾರೆ. ಸರ್ಕಾರವು ನಮ್ಮನ್ನು ಎಂದು ಕಾಯಂ ಮಾಡುತ್ತದೆ ಎಂದು ಚಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ’ ಎಂದು ತಿಳಿಸಿದರು.</p>.<p>‘ಸುಪ್ರೀಂ ಕೋರ್ಟ್ ಕೂಡ ನಮ್ಮಂಥ ನೌಕರರ ಪರವಾಗಿಯೇ ಇದೆ. ಆದರೆ, ಈ ತೀರ್ಪಿಗೆ ವಿರುದ್ಧವಾಗಿ ಸರ್ಕಾರವು ನಡೆದುಕೊಳ್ಳುತ್ತಿದೆ. ಜೀತಪದ್ಧತಿ ಪ್ರೋತ್ಸಾಹಿಸುವ ದಮನಕಾರಿ ಧೋರಣೆಯನ್ನು ತಾಳುವುದು ಸರಿಯಲ್ಲ. ಹೀಗಾಗಿ ಸರ್ಕಾರವು ವಜಾ ಆದೇಶ ರದ್ದುಗೊಳಿಸಬೇಕು. ನಮ್ಮನ್ನು ಕಾಯಂಗೊಳಿಸಬೇಕು. ಇತರ ನೌಕರರಿಗೆ ದೊರೆಯುವ ಸೌಲಭ್ಯಗಳನ್ನು ಕಲ್ಪಿಸಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>