ಬೆಳಗಾವಿ: ‘ಚುನಾವಣೆ ಎಂದಾಕ್ಷಣ ಟಿಕೆಟ್ ಕೇಳುವವರು ಪಕ್ಷದಲ್ಲಿ ಬಹಳಷ್ಟು ಮಂದಿ ಇರುತ್ತಾರೆ. ಆದರೆ ಪಕ್ಷ ತೀರ್ಮಾನಿಸಿದ ಮೇಲೆ ನಡೆದುಕೊಳ್ಳುವ ಶಿಸ್ತು ನಮ್ಮಲ್ಲಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಾಗಿದ್ದವರು ಕೂಡ ಒಗ್ಗಟ್ಟಿನಿಂದ ಕೆಲಸ ಮಾಡುವುದಾಗಿ ಹೇಳಿದ್ದಾರೆ. ಹೀಗಾಗಿ, ಅಪಸ್ವರ ಇಲ್ಲ’ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು.