‘ನೆರೆ, ಅತಿವೃಷ್ಟಿಯಿಂದ ಸಂತ್ರಸ್ತರಾದವರಿಗೆ ಸಮರ್ಪಕವಾಗಿ ಪರಿಹಾರ ನೀಡಲಾಗಿದೆ. ಅದನ್ನು ಪ್ರತಿಪಕ್ಷದವರು ವೀಕ್ಷಿಸಿದ್ದರೆ, ಅವರು ಹೋರಾಟ ಮಾಡುತ್ತಿರಲಿಲ್ಲ. ಹಾನಿಯಾದಾಗ ಶೇ 100ರಷ್ಟು ಸರಿಪಡಿಸುವುದಕ್ಕೆ ಆಗುವುದಿಲ್ಲ. ಹಂತ ಹಂತವಾಗಿ ದುರಸ್ತಿ ಮಾಡಬೇಕಾಗುತ್ತದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ಸ್ವತಃ ಓಡಾಡಿ ಉಸ್ತುವಾರಿ ವಹಿಸಿದ್ದಾರೆ. ಅಲ್ಲಿ ಇಲ್ಲಿ ಸ್ವಲ್ಪ ಹೆಚ್ಚು ಕಡಿಮೆಯಾಗಿದ್ದರೆ ಸರಿಪಡಿಸಲಾಗುವುದು. ಹತ್ತಾರು ಸಾವಿರ ಕೋಟಿ, ಲಕ್ಷಾಂತರ ಕೋಟಿ ತಕ್ಷಣ ತಂದುಕೊಡುವುದಕ್ಕೆ ಆಗುವುದಿಲ್ಲ. ತುರ್ತಾಗಿ ಆಗಬೇಕಾದ ಕೆಲಸಗಳನ್ನು ಮಾಡಿದ್ದೇವೆ. ಕ್ರಮೇಣವಾಗಿ ಎಲ್ಲವನ್ನೂ ಸರಿಪಡಿಸಲಾಗುವುದು. ಆದರೆ, ತಕ್ಷಣಕ್ಕೆ ಏನು ಬೇಕಿತ್ತೋ ಅದನ್ನು ಸರ್ಕಾರ ಮಾಡಿದೆ’ ಎಂದು ಸಮರ್ಥಿಸಿಕೊಂಡರು.