ರಾಮದುರ್ಗ: ಜಗದೀಶ ಶೆಟ್ಟರ್ ಹೊರಗಿನವರಲ್ಲ. ಅವರು ಮುಖ್ಯಮಂತ್ರಿಯಾದವರು, ನಮ್ಮ ಏಳ್ಗೆಗಾಗಿ ಶ್ರಮಿಸಿದವರು. ಅವರನ್ನು ನಾವು ಎಂದಿಗೂ ಬೇರೆಯವರು ಎಂದು ಬಿಂಬಿಸಬಾರದು ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ತಾಲ್ಲೂಕಿನ ಕಟಕೋಳ ಗ್ರಾಮ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ನಡೆಸಿ, ಚುನಾವಣೆ ವೇಳೆಯಲ್ಲಿ ಕೆಲವರು ಜಾತಿ ವಿಷಬೀಜ ಬಿತ್ತಲು ಹೊರಟಿದ್ದಾರೆ ಎಂದರು.
ನರೇಂದ್ರ ಮೋದಿ ಪ್ರಧಾನಿಯಾದರೆ ಬೆಳಗಾವಿಯಿಂದ ಗೆಲ್ಲುವ ಜಗದೀಶ ಶೆಟ್ಟರ್ ಅವರು ಕೇಂದ್ರ ಮಂತ್ರಿಯಾಗುತ್ತಾರೆ. ಅವರಿಂದ ಈ ಭಾಗದ ನೀರಾವರಿ ಯೋಜನೆಗಳನ್ನು ಅಭಿವೃದ್ಧಿ ಪಡಿಸುವ ವಿಷಯಗಳನ್ನು ಪ್ರಸ್ತಾಪಿಸಲಾಗುವುದು ಎಂದರು.
ಗ್ರಾಮ ಪ್ರವೇಶಿಸುತ್ತಿದ್ದಂತೆ ತಾಲ್ಲೂಕಿನ ಬೇರೆ ಬೇರೆ ಭಾಗಗಳಿಂದ ಆಗಮಿಸಿದ್ದ ಹಿರಿಯರ ಅಭಿಪ್ರಾಯ ಸಂಗ್ರಹಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ. ಕೆ ವಿ ಪಾಟೀಲ, ಪಕ್ಷ ಬಲಪಡಿಸುವ ಕುರಿತು ಮಾಹಿತಿ ನೀಡಿದರು.