ಸಂಘದ ಅಧ್ಯಕ್ಷ ಅಜಿತಕುಮಾರ ಮುರುಗುಂಡೆ ಮಾತನಾಡಿ, ‘ಜೈನ ಸಮಾಜ ಚಿಕ್ಕದಾಗಿದ್ದು, ಎಲ್ಲ ಕಡೆ ವಿಸ್ತರಿಸಿಕೊಂಡಿದೆ. ಜೈನ ಸಮಾಜ ಒಗ್ಗೂಡಿಸಲು ಮತ್ತು ವಿವಿಧ ಘಟಕಗಳನ್ನು ಒಂದೇ ವೇದಿಕೆಯಡಿ ತರುವ ನಿಟ್ಟಿನಲ್ಲಿ ಸಂಘ ಹುಟ್ಟು ಹಾಕಲಾಗುತ್ತಿದೆ. ಸಮಾಜದ ಕೃಷಿಕರು, ವಿದ್ಯಾರ್ಥಿಗಳು, ಮಹಿಳೆಯರು, ಧಾರ್ಮಿಕ ಚಟುವಟಿಕೆಗಳು, ಶಿಕ್ಷಣ, ಸಾಹಿತ್ಯ, ಕಲೆ, ಕ್ರೀಡೆ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಿದೆ’ ಎಂದು ಮಾಹಿತಿ ನೀಡಿದರು.