ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Crime | ಜೈನ ಮುನಿ ಹತ್ಯೆ ಆರೋಪಿಗಳು ನ್ಯಾಯಾಂಗ ಬಂಧನಕ್ಕೆ

Published 17 ಜುಲೈ 2023, 12:34 IST
Last Updated 17 ಜುಲೈ 2023, 12:34 IST
ಅಕ್ಷರ ಗಾತ್ರ

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಹಿರೇಕೋಡಿಯ ನಂದಿಪರ್ವತ ಆಶ್ರಮದ ಮುನಿ ಕಾಮಕುಮಾರ ನಂದಿ ಮಹಾರಾಜ ಅವರ ಕೊಲೆ ಆರೋಪಿಗಳನ್ನು ಜುಲೈ 21ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಆರೋಪಿಗಳಾದ ನಾರಾಯಣ ಮಾಳಿ ಹಾಗೂ ಹಸನ್‌ ದಲಾಯತ್‌ ಅವರನ್ನು ಏಳು ದಿನಗಳವರೆಗೆ ಪೊಲೀಸ್‌ ಕಸ್ಟಡಿಗೆ ನೀಡಲಾಗಿತ್ತು. ಅವಧಿ ಮುಗಿದ ಕಾರಣ ಪೊಲೀಸರು, ಸೋಮವಾರ ಮತ್ತೆ ಇಲ್ಲಿನ ಪ್ರಧಾನ ದಿವಾಣಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ನ್ಯಾಯಾಧೀಶ ಚಿದಾನಂದ ಬಡಿಗೇರ ಅವರು ವಿಚಾರಣೆ ನಡೆಸಿ ಐದು ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.

ಚಿಕ್ಕೋಡಿ ಸಿಪಿಐ ಆರ್.ಆರ್.ಪಾಟೀಲ ನೇತೃತ್ವದಲ್ಲಿ ಆರೋಪಿಗಳನ್ನು ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಯಿತು.

ಕಾಮಕುಮಾರ ನಂದಿ ಮಹಾರಾಜ ಅವರನ್ನು ಜುಲೈ 5ರಂದು ಕೊಲೆ ಮಾಡಲಾಗಿತ್ತು. ಜುಲೈ 8ರಂದು ಕಟಕಬಾವಿ ಗ್ರಾಮದ ಕೊಳವೆಬಾವಿಯಲ್ಲಿ ಅವರ ಶವ ತುಂಡರಿಸಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT