1988ರಲ್ಲಿ ಮುನಿದೀಕ್ಷೆ:ಜುಗೂಳದಲ್ಲಿಯೇ ಜನಿಸಿದ್ದ ಅವರು, ಜೈನ ಧರ್ಮದ ಅಹಿಂಸಾ ತತ್ವಗಳಿಗೆ ಆಕರ್ಷಿತರಾಗಿ 1988ರ ಮಾರ್ಚ್ 31ರಂದು ಆಚಾರ್ಯ ವಿದ್ಯಾಸಾಗರ ಅವರಿಂದ ಮುನಿದೀಕ್ಷೆ ಪಡೆದಿದ್ದರು. ರಾಜಸ್ಥಾನ, ಉತ್ತರ ಪ್ರದೇಶ, ದೆಹಲಿ ಮೊದಲಾದ ಕಡೆಗಳಲ್ಲಿ ತಲಾ ಎರಡು ವರ್ಷ, ಮಧ್ಯಪ್ರದೇಶದಲ್ಲಿ 15 ವರ್ಷ, ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿ ತಲಾ 5 ವರ್ಷಗಳವರೆಗೆ ಆದಿವಾಸಿಗಳ ಮನಪರಿವರ್ತನೆ ಮಾಡಿದ್ದರು. ಹೆಚ್ಚು ಕಾಲ ಅರಣ್ಯ ಪ್ರದೇಶದಲ್ಲಿ ಸಮಯ ಕಳೆದಿದ್ದರಿಂದ ಅವರನ್ನು ‘ಜಂಗಲವಾಲೆ ಬಾಬಾ’ ಎಂದು ಭಕ್ತರು ಕರೆಯುತ್ತಿದ್ದರು.