<p><strong>ಬೆಳಗಾವಿ:</strong> ‘ಜೈನ ಸಮುದಾಯದ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿ ಸರ್ಕಾರದ ಗಮನಸೆಳೆಯಲು ಸಮಸ್ತ ಜೈನ ಅಲ್ಪಸಂಖ್ಯಾತರ ಹೋರಾಟ ಸಮಿತಿ ವತಿಯಿಂದ ತಾಲ್ಲೂಕಿನ ಬಸ್ತವಾಡದಲ್ಲಿ ಡಿ.9ರಂದು ಬೆಳಿಗ್ಗೆ 11ಕ್ಕೆ ಜೈನ ಸಮಾವೇಶ ಆಯೋಜಿಸಲಾಗಿದೆ’ ಎಂದು ಮುಖಂಡ ವಿನೋದ ದೊಡ್ಡಣ್ಣವರ ಹೇಳಿದರು.</p><p>ಇಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಸಮಾವೇಶದಲ್ಲಿ ಜೈನ ಸಮುದಾಯದ 10 ಸಾವಿರಕ್ಕೂ ಅಧಿಕ ಜನರು ಪಾಲ್ಗೊಂಡು, ನಮ್ಮ ಹಕ್ಕಿಗಾಗಿ ಧ್ವನಿ ಎತ್ತಲಿದ್ದೇವೆ’ ಎಂದರು.</p><p>‘ರಾಜ್ಯ ಸರ್ಕಾರವು ಜೈನ ಅಭಿವೃದ್ಧಿ ನಿಗಮ ಸ್ಥಾಪಿಸಿ, ವಾರ್ಷಿಕ ₹200 ಕೋಟಿ ಮೀಸಲಿಡಬೇಕು. ಜೈನ ಸಮುದಾಯದವರು ಸಸ್ಯಾಹಾರಿಗಳು. ಹಾಗಾಗಿ ಜೈನ ಸಮುದಾಯದ ಶಿಕ್ಷಣ ಸಂಸ್ಥೆಗಳಲ್ಲಿ ಸರ್ಕಾರದ ವತಿಯಿಂದ ಮೊಟ್ಟೆ ನೀಡುವುದನ್ನು ನಿಲ್ಲಿಸಬೇಕು’ ಎಂದು ಒತ್ತಾಯಿಸಿದರು.</p><p>ಮುಖಂಡರಾದ ಅಭಯ ಅವಲಕ್ಕಿ, ವರ್ಧಮಾನ ಮಾರ್ಗನಕೊಪ್ಪ, ರಾಜೇಂದ್ರ ಜೈನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಜೈನ ಸಮುದಾಯದ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿ ಸರ್ಕಾರದ ಗಮನಸೆಳೆಯಲು ಸಮಸ್ತ ಜೈನ ಅಲ್ಪಸಂಖ್ಯಾತರ ಹೋರಾಟ ಸಮಿತಿ ವತಿಯಿಂದ ತಾಲ್ಲೂಕಿನ ಬಸ್ತವಾಡದಲ್ಲಿ ಡಿ.9ರಂದು ಬೆಳಿಗ್ಗೆ 11ಕ್ಕೆ ಜೈನ ಸಮಾವೇಶ ಆಯೋಜಿಸಲಾಗಿದೆ’ ಎಂದು ಮುಖಂಡ ವಿನೋದ ದೊಡ್ಡಣ್ಣವರ ಹೇಳಿದರು.</p><p>ಇಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಸಮಾವೇಶದಲ್ಲಿ ಜೈನ ಸಮುದಾಯದ 10 ಸಾವಿರಕ್ಕೂ ಅಧಿಕ ಜನರು ಪಾಲ್ಗೊಂಡು, ನಮ್ಮ ಹಕ್ಕಿಗಾಗಿ ಧ್ವನಿ ಎತ್ತಲಿದ್ದೇವೆ’ ಎಂದರು.</p><p>‘ರಾಜ್ಯ ಸರ್ಕಾರವು ಜೈನ ಅಭಿವೃದ್ಧಿ ನಿಗಮ ಸ್ಥಾಪಿಸಿ, ವಾರ್ಷಿಕ ₹200 ಕೋಟಿ ಮೀಸಲಿಡಬೇಕು. ಜೈನ ಸಮುದಾಯದವರು ಸಸ್ಯಾಹಾರಿಗಳು. ಹಾಗಾಗಿ ಜೈನ ಸಮುದಾಯದ ಶಿಕ್ಷಣ ಸಂಸ್ಥೆಗಳಲ್ಲಿ ಸರ್ಕಾರದ ವತಿಯಿಂದ ಮೊಟ್ಟೆ ನೀಡುವುದನ್ನು ನಿಲ್ಲಿಸಬೇಕು’ ಎಂದು ಒತ್ತಾಯಿಸಿದರು.</p><p>ಮುಖಂಡರಾದ ಅಭಯ ಅವಲಕ್ಕಿ, ವರ್ಧಮಾನ ಮಾರ್ಗನಕೊಪ್ಪ, ರಾಜೇಂದ್ರ ಜೈನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>