<p>ಚನ್ನಮ್ಮನ ಕಿತ್ತೂರು: ‘ಮಾದಕ ವಸ್ತುಗಳ ಹವ್ಯಾಸವು ಕೌಟುಂಬಿಕ ನೆಮ್ಮದಿಯನ್ನು ಹಾಳು ಮಾಡುತ್ತದೆ. ಸಮಾಜದಲ್ಲಿ ವ್ಯಕ್ತಿತ್ವದ ಘನತೆ ಕುಗ್ಗಲು ಕಾರಣವಾಗುತ್ತದೆ’ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಅಭಿಪ್ರಾಯಪಟ್ಟರು.</p>.<p>ಇಲ್ಲಿಯ ವೀರಭದ್ರೇಶ್ವರ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಬುಧವಾರ ಆಯೋಜಿಸಲಾಗಿದ್ದ ಜನಜಾಗೃತಿ ಸಮಾವೇಶಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ರಾಜಣ್ಣ ಕೊರವಿ, ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ, ತಾಲ್ಲೂಕು ವೈದ್ಯಾಧಿಕಾರಿ ಎಸ್.ಎಸ್. ಸಿದ್ದಣ್ಣವರ, ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ, ಡಾ. ಜಗದೀಶ ಹಾರುಗೊಪ್ಪ, ಬಸವರಾಜ ಸೊಪ್ಪಿಮಠ, ವಿಠ್ಠಲ ಪಿಶೆ ಮಾತನಾಡಿದರು.</p>.<p>ಸತೀಶ ನಾಯ್ಕ, ಸಂದೀಪ ನಾಯ್ಕ, ರಾಧಾ ಕಾದ್ರೊಳ್ಳಿ, ಕೃಷ್ಣಾಜಿ ಕುಲಕರ್ಣಿ, ರಾಜು ಮಿರ್ಜನ್ನವರ, ಉಮಾದೇವಿ ಬಿಕ್ಕಣ್ಣವರ, ಲಕ್ಷ್ಮಣ ಕುಂದಗೋಳ, ಸತೀಶ ಬಾಸ್ಕರ ಇದ್ದರು.</p>.<p>ಇದಕ್ಕೂ ಮೊದಲು ನಡೆದ ಜನಜಾಗೃತಿ ಜಾಥಾವನ್ನು ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ಉದ್ಘಾಟಿಸಿದರು. ಪಟ್ಟಣದ ಪ್ರಮುಖ ಬೀದಿಯಲ್ಲಿ ಜಾಗೃತಿ ನಾಮಫಲಕ ಹಿಡಿದು ಮಹಿಳೆಯರು ಸಂಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚನ್ನಮ್ಮನ ಕಿತ್ತೂರು: ‘ಮಾದಕ ವಸ್ತುಗಳ ಹವ್ಯಾಸವು ಕೌಟುಂಬಿಕ ನೆಮ್ಮದಿಯನ್ನು ಹಾಳು ಮಾಡುತ್ತದೆ. ಸಮಾಜದಲ್ಲಿ ವ್ಯಕ್ತಿತ್ವದ ಘನತೆ ಕುಗ್ಗಲು ಕಾರಣವಾಗುತ್ತದೆ’ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಅಭಿಪ್ರಾಯಪಟ್ಟರು.</p>.<p>ಇಲ್ಲಿಯ ವೀರಭದ್ರೇಶ್ವರ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಬುಧವಾರ ಆಯೋಜಿಸಲಾಗಿದ್ದ ಜನಜಾಗೃತಿ ಸಮಾವೇಶಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ರಾಜಣ್ಣ ಕೊರವಿ, ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ, ತಾಲ್ಲೂಕು ವೈದ್ಯಾಧಿಕಾರಿ ಎಸ್.ಎಸ್. ಸಿದ್ದಣ್ಣವರ, ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ, ಡಾ. ಜಗದೀಶ ಹಾರುಗೊಪ್ಪ, ಬಸವರಾಜ ಸೊಪ್ಪಿಮಠ, ವಿಠ್ಠಲ ಪಿಶೆ ಮಾತನಾಡಿದರು.</p>.<p>ಸತೀಶ ನಾಯ್ಕ, ಸಂದೀಪ ನಾಯ್ಕ, ರಾಧಾ ಕಾದ್ರೊಳ್ಳಿ, ಕೃಷ್ಣಾಜಿ ಕುಲಕರ್ಣಿ, ರಾಜು ಮಿರ್ಜನ್ನವರ, ಉಮಾದೇವಿ ಬಿಕ್ಕಣ್ಣವರ, ಲಕ್ಷ್ಮಣ ಕುಂದಗೋಳ, ಸತೀಶ ಬಾಸ್ಕರ ಇದ್ದರು.</p>.<p>ಇದಕ್ಕೂ ಮೊದಲು ನಡೆದ ಜನಜಾಗೃತಿ ಜಾಥಾವನ್ನು ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ಉದ್ಘಾಟಿಸಿದರು. ಪಟ್ಟಣದ ಪ್ರಮುಖ ಬೀದಿಯಲ್ಲಿ ಜಾಗೃತಿ ನಾಮಫಲಕ ಹಿಡಿದು ಮಹಿಳೆಯರು ಸಂಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>