<p><strong>ಬೆಳಗಾವಿ:</strong> ‘ಸಿಇಟಿ ಬರೆಯಲು ಹೋದ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿದರೆ ಸುಮ್ಮನೇ ಇರಬೇಕೆ? ಜನಿವಾರ ಕತ್ತರಿಸಿದವರ ಕೈ ಕತ್ತಿಸಿದರೆ ಸರ್ಕಾರ ಸುಮ್ಮನೆ ಇರುತ್ತದೆಯೇ?’ ಎಂದು ಶಾಸಕ ಅಭಯ ಪಾಟೀಲ ಕಿಡಿ ಕಾರಿದರು.</p>.<p>ಜನಿವಾರ ಕತ್ತಿರಿಸಿದ ಘಟನೆ ಖಂಡಿಸಿ ಬ್ರಾಹ್ಮಣ ಸಮಾಜದಿಂದ ನಗರದಲ್ಲಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ‘ಹಿಜಾಬ್ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಬಹಳ ಕಾಳಜಿ ತೋರಿಸಿದೆ. ಆದರೆ, ಜನಿವಾರದ ವಿಚಾರದಲ್ಲಿ ಏಕೆ ಮೌನವಾಗಿದೆ? ಈ ಧೋರಣೆ ನೋಡಿದರೆ ಕೃತ್ಯದ ಹಿಂದೆ ಸರ್ಕಾರದ ಕೈವಾಡ ಇದೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ’ ಎಂದು ಆರೋಪಿಸಿದರು.</p>.<p>ಸಮಾಜದ ಮುಖಂಡ ಅನಿಲ ಪೋತದಾರ ಮಾತನಾಡಿ, ‘ಇಂಥ ಘಟನೆ ಮರುಕಳಿಸಿದರೆ ಬ್ರಾಹ್ಮಣರು ಪರಶುರಾಮನ ಅವತಾರ ತಾಳಬೇಕಾಗುತ್ತದೆ. ಜನಿವಾರಕ್ಕೆ ಕೈ ಹಾಕಿದರೆ ತಲವಾರ ಹಿಡಿಯಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<p>ಇದಕ್ಕೂ ಮುನ್ನ ರಾಣಿ ಚನ್ನಮ್ಮ ವೃತ್ತದಲ್ಲಿ ಒಂದು ತಾಸು ಮಾನವ ಸರಪಳಿ ನಿರ್ಮಿಸಿದರು. ಜಿಲ್ಲಾಧಿಕಾರಿ ಕಚೇರಿ ಮುಂದೆ ಜನಿವಾರ ಕೈಯಲ್ಲಿ ಹಿಡಿದುಕೊಂಡು ಧರಣಿ ಕೂಡ ಮಾಡಿದರು.</p>.<p>ಕೃಷ್ಣ ಮಠದ ಆಚಾರ್ಯ ಶ್ರೀನಿವಾಸ ಹೊನ್ನಿದಿಬ್ಬ, ಸಮೀರ್ ಆಚಾರ್ಯ, ಗುರುರಾಜ್ ಆಚಾರ್ಯ, ಜಿಲ್ಲಾ ಬ್ರಾಹ್ಮಣ ಸಮಾಜ ಟ್ರಸ್ಟ್ ಉಪಾಧ್ಯಕ್ಷ ಭರತ ದೇಶಪಾಂಡೆ, ಆರ್.ಎಸ್ ಮುತಾಲಿಕ ದೇಸಾಯಿ, ಎಕೆಬಿಎಂಎಸ್ನ ಜಿಲ್ಲಾ ಪ್ರತಿನಿಧಿ ಅಕ್ಷಯ ಕುಲಕರ್ಣಿ, ಅಶೋಕ್ ದೇಶಪಾಂಡೆ, ಅನುಶ್ರೀ ದೇಶಪಾಂಡೆ ನೇತೃತ್ವ ವಹಿಸಿದ್ದರು.</p>.<h2>‘ಜನಿವಾರ ಅನಗತ್ಯ ಹಿಗ್ಗಿಸಬೇಡಿ’</h2>.<p><strong>ಬೆಳಗಾವಿ:</strong> ‘ಜನಿವಾರ ತೆಗೆಸಿದ ವಿಚಾರವನ್ನು ಬಿಜೆಪಿಯವರು ಅನಗತ್ಯವಾಗಿ ದೊಡ್ಡದು ಮಾಡುತ್ತಿದ್ದಾರೆ. ಬೆಳಗಾವಿಯಲ್ಲಿ ಬಿಜೆಪಿ ಶಾಸಕರೇ ಪ್ರತಿಭಟನೆ ಮಾಡಿದ್ದಾರೆ. ಬೇರೆ ಯಾರಿಗಾದರೂ ಇಂಥದ್ದು ಆಗಿದ್ದರೆ ಬಾಯಿ ಬಿಡುತ್ತಿರಲಿಲ್ಲ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ; ಶಾಸಕ ಅಭಯ ಪಾಟೀಲ ಅವರನ್ನು ಟೀಕಿಸಿದರು.</p>.<p>ನಗರದಲ್ಲಿ ಸೋಮವಾರ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ‘ಹಿಜಾಬ್ ವಿವಾದವೇ ಬೇರೆ ಜನಿವಾರ ವಿಷಯವೇ ಬೇರೆ. ಅದು ಆಕಸ್ಮಿಕವಾಗಿ ನಡೆದಿತ್ತು. ಎರಡನ್ನೂ ಹೋಲಿಕೆ ಮಾಡಲು ಆಗುವುದಿಲ್ಲ. ತಪ್ಪಿತಸ್ಥರ ಮೇಲೆ ಕ್ರಮ ಆಗಲಿ. ಆದರೆ, ಘಟನೆಗೂ ಸರ್ಕಾರಕ್ಕೂ ಏನೂ ಸಂಬಂಧವಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಸಿಇಟಿ ಬರೆಯಲು ಹೋದ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿದರೆ ಸುಮ್ಮನೇ ಇರಬೇಕೆ? ಜನಿವಾರ ಕತ್ತರಿಸಿದವರ ಕೈ ಕತ್ತಿಸಿದರೆ ಸರ್ಕಾರ ಸುಮ್ಮನೆ ಇರುತ್ತದೆಯೇ?’ ಎಂದು ಶಾಸಕ ಅಭಯ ಪಾಟೀಲ ಕಿಡಿ ಕಾರಿದರು.</p>.<p>ಜನಿವಾರ ಕತ್ತಿರಿಸಿದ ಘಟನೆ ಖಂಡಿಸಿ ಬ್ರಾಹ್ಮಣ ಸಮಾಜದಿಂದ ನಗರದಲ್ಲಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ‘ಹಿಜಾಬ್ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಬಹಳ ಕಾಳಜಿ ತೋರಿಸಿದೆ. ಆದರೆ, ಜನಿವಾರದ ವಿಚಾರದಲ್ಲಿ ಏಕೆ ಮೌನವಾಗಿದೆ? ಈ ಧೋರಣೆ ನೋಡಿದರೆ ಕೃತ್ಯದ ಹಿಂದೆ ಸರ್ಕಾರದ ಕೈವಾಡ ಇದೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ’ ಎಂದು ಆರೋಪಿಸಿದರು.</p>.<p>ಸಮಾಜದ ಮುಖಂಡ ಅನಿಲ ಪೋತದಾರ ಮಾತನಾಡಿ, ‘ಇಂಥ ಘಟನೆ ಮರುಕಳಿಸಿದರೆ ಬ್ರಾಹ್ಮಣರು ಪರಶುರಾಮನ ಅವತಾರ ತಾಳಬೇಕಾಗುತ್ತದೆ. ಜನಿವಾರಕ್ಕೆ ಕೈ ಹಾಕಿದರೆ ತಲವಾರ ಹಿಡಿಯಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<p>ಇದಕ್ಕೂ ಮುನ್ನ ರಾಣಿ ಚನ್ನಮ್ಮ ವೃತ್ತದಲ್ಲಿ ಒಂದು ತಾಸು ಮಾನವ ಸರಪಳಿ ನಿರ್ಮಿಸಿದರು. ಜಿಲ್ಲಾಧಿಕಾರಿ ಕಚೇರಿ ಮುಂದೆ ಜನಿವಾರ ಕೈಯಲ್ಲಿ ಹಿಡಿದುಕೊಂಡು ಧರಣಿ ಕೂಡ ಮಾಡಿದರು.</p>.<p>ಕೃಷ್ಣ ಮಠದ ಆಚಾರ್ಯ ಶ್ರೀನಿವಾಸ ಹೊನ್ನಿದಿಬ್ಬ, ಸಮೀರ್ ಆಚಾರ್ಯ, ಗುರುರಾಜ್ ಆಚಾರ್ಯ, ಜಿಲ್ಲಾ ಬ್ರಾಹ್ಮಣ ಸಮಾಜ ಟ್ರಸ್ಟ್ ಉಪಾಧ್ಯಕ್ಷ ಭರತ ದೇಶಪಾಂಡೆ, ಆರ್.ಎಸ್ ಮುತಾಲಿಕ ದೇಸಾಯಿ, ಎಕೆಬಿಎಂಎಸ್ನ ಜಿಲ್ಲಾ ಪ್ರತಿನಿಧಿ ಅಕ್ಷಯ ಕುಲಕರ್ಣಿ, ಅಶೋಕ್ ದೇಶಪಾಂಡೆ, ಅನುಶ್ರೀ ದೇಶಪಾಂಡೆ ನೇತೃತ್ವ ವಹಿಸಿದ್ದರು.</p>.<h2>‘ಜನಿವಾರ ಅನಗತ್ಯ ಹಿಗ್ಗಿಸಬೇಡಿ’</h2>.<p><strong>ಬೆಳಗಾವಿ:</strong> ‘ಜನಿವಾರ ತೆಗೆಸಿದ ವಿಚಾರವನ್ನು ಬಿಜೆಪಿಯವರು ಅನಗತ್ಯವಾಗಿ ದೊಡ್ಡದು ಮಾಡುತ್ತಿದ್ದಾರೆ. ಬೆಳಗಾವಿಯಲ್ಲಿ ಬಿಜೆಪಿ ಶಾಸಕರೇ ಪ್ರತಿಭಟನೆ ಮಾಡಿದ್ದಾರೆ. ಬೇರೆ ಯಾರಿಗಾದರೂ ಇಂಥದ್ದು ಆಗಿದ್ದರೆ ಬಾಯಿ ಬಿಡುತ್ತಿರಲಿಲ್ಲ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ; ಶಾಸಕ ಅಭಯ ಪಾಟೀಲ ಅವರನ್ನು ಟೀಕಿಸಿದರು.</p>.<p>ನಗರದಲ್ಲಿ ಸೋಮವಾರ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ‘ಹಿಜಾಬ್ ವಿವಾದವೇ ಬೇರೆ ಜನಿವಾರ ವಿಷಯವೇ ಬೇರೆ. ಅದು ಆಕಸ್ಮಿಕವಾಗಿ ನಡೆದಿತ್ತು. ಎರಡನ್ನೂ ಹೋಲಿಕೆ ಮಾಡಲು ಆಗುವುದಿಲ್ಲ. ತಪ್ಪಿತಸ್ಥರ ಮೇಲೆ ಕ್ರಮ ಆಗಲಿ. ಆದರೆ, ಘಟನೆಗೂ ಸರ್ಕಾರಕ್ಕೂ ಏನೂ ಸಂಬಂಧವಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>