<p><strong>ಬೆಳಗಾವಿ</strong>: ‘ಮಕ್ಕಳೇ ಈ ದೇಶದ ಭವಿಷ್ಯ. ಅವರು ಆರೋಗ್ಯಯುತವಾಗಿ ಬೆಳೆದದರೆ, ದೇಶದ ಅತ್ಯುಪಯುಕ್ತ ಆಸ್ತಿಯಾಗಬಲ್ಲರು’ ಎಂದು ನಿರ್ದೇಶಕ ಡಾ.ಎಸ್.ಸಿ.ಧಾರವಾಡ ಹೇಳಿದರು.</p>.<p>ಇಲ್ಲಿನ ಕೆಎಲ್ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆಯಲ್ಲಿ ಚಿಕ್ಕ ಮಕ್ಕಳ ವಿಭಾಗ ಆಯೋಜಿಸಿದ್ದ ರಾಷ್ಟ್ರೀಯ ಜಂತುಹುಳು ನಿವಾರಣೆ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು. </p>.<p>ಡಾ.ಬಸವರಾಜ ಕುಡಸೋಮಣ್ಣವರ, ಜಂತುಹುಳು ಹುಟ್ಟುವ ಪ್ರಕ್ರಿಯೆ, ಅವು ಶರೀರ ಸೇರುವ ಬಗೆ, ಅವುಗಳಿಂದ ರಕ್ಷಣೆ ವಿಷಯ ಕುರಿತು ಉಪನ್ಯಾಸ ನೀಡಿದರು.</p>.<p>ಚಿಕ್ಕ ಮಕ್ಕಳ ವಿಭಾಗದ ಮುಖ್ಯಸ್ಥ ಡಾ.ಎಂ.ಎಸ್.ಕಡ್ಡಿ, ತಜ್ಞ ಡಾ.ಸಂತೋಷಕುಮಾರ ಕರಮಸಿ ಸಭಿಕರ ಪ್ರಶ್ನೆಗೆ ಉತ್ತರಿಸಿದರು. </p>.<p>ಡಾ.ಸೌಮ್ಯಾ ವೆರ್ಣೇಕರ್, ಡಾ. ಯೋಗೇಶ ರಾವಳ ಇತರರಿದ್ದರು. ಸಂತೋಷ ಇತಾಪೆ ನಿರೂಪಿಸಿದರು.<br>30ಕ್ಕೂ ಅಧಿಕ ಮಕ್ಕಳಿಗೆ ಜಂತುಹುಳು ನಿವಾರಣೆ ಔಷಧ ಉಚಿತವಾಗಿ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಮಕ್ಕಳೇ ಈ ದೇಶದ ಭವಿಷ್ಯ. ಅವರು ಆರೋಗ್ಯಯುತವಾಗಿ ಬೆಳೆದದರೆ, ದೇಶದ ಅತ್ಯುಪಯುಕ್ತ ಆಸ್ತಿಯಾಗಬಲ್ಲರು’ ಎಂದು ನಿರ್ದೇಶಕ ಡಾ.ಎಸ್.ಸಿ.ಧಾರವಾಡ ಹೇಳಿದರು.</p>.<p>ಇಲ್ಲಿನ ಕೆಎಲ್ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆಯಲ್ಲಿ ಚಿಕ್ಕ ಮಕ್ಕಳ ವಿಭಾಗ ಆಯೋಜಿಸಿದ್ದ ರಾಷ್ಟ್ರೀಯ ಜಂತುಹುಳು ನಿವಾರಣೆ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು. </p>.<p>ಡಾ.ಬಸವರಾಜ ಕುಡಸೋಮಣ್ಣವರ, ಜಂತುಹುಳು ಹುಟ್ಟುವ ಪ್ರಕ್ರಿಯೆ, ಅವು ಶರೀರ ಸೇರುವ ಬಗೆ, ಅವುಗಳಿಂದ ರಕ್ಷಣೆ ವಿಷಯ ಕುರಿತು ಉಪನ್ಯಾಸ ನೀಡಿದರು.</p>.<p>ಚಿಕ್ಕ ಮಕ್ಕಳ ವಿಭಾಗದ ಮುಖ್ಯಸ್ಥ ಡಾ.ಎಂ.ಎಸ್.ಕಡ್ಡಿ, ತಜ್ಞ ಡಾ.ಸಂತೋಷಕುಮಾರ ಕರಮಸಿ ಸಭಿಕರ ಪ್ರಶ್ನೆಗೆ ಉತ್ತರಿಸಿದರು. </p>.<p>ಡಾ.ಸೌಮ್ಯಾ ವೆರ್ಣೇಕರ್, ಡಾ. ಯೋಗೇಶ ರಾವಳ ಇತರರಿದ್ದರು. ಸಂತೋಷ ಇತಾಪೆ ನಿರೂಪಿಸಿದರು.<br>30ಕ್ಕೂ ಅಧಿಕ ಮಕ್ಕಳಿಗೆ ಜಂತುಹುಳು ನಿವಾರಣೆ ಔಷಧ ಉಚಿತವಾಗಿ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>