ನಾಗರಮುನ್ನೋಳಿ: ‘ಸಾಧು–ಸಂತರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ಸಾಗಬೇಕು’ ಎಂದು ಕವಲಗುಡ್ಡದ ಸಿದ್ಧಶಿವಯೋಗಿ ಅಮರೇಶ್ವರ ಮಹಾರಾಜರು ಹೇಳಿದರು.
ಇಲ್ಲಿನ ನಾಗರಾಳ ಕೋಡಿಯಲ್ಲಿ ನಡೆದ ಗುತ್ಯೆಪ್ಪ ದೇವರ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಹಾಲುಮತ ಸಮುದಾಯದವರು ಶಿಕ್ಷಣಕ್ಕೆ ಒತ್ತು ನೀಡಬೇಕು. ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕು’ ಎಂದರು.