<p>ಬೆಳಗಾವಿ: ‘ಜಿಲ್ಲೆಯಲ್ಲಿ ನೆರೆ ಮತ್ತು ಅತಿವೃಷ್ಟಿಯಿಂದ ಮನೆ, ಬೆಳೆ ಮೊದಲಾದವುಗಳನ್ನು ಕಳೆದುಕೊಂಡಿರುವ ಸಂತ್ರಸ್ತರಿಗೆ ಕೂಡಲೇ ಸಮರ್ಪಕ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಇಲ್ಲಿನ ರಾಣಿ ಚನ್ನಮ್ಮ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>‘2019ರಲ್ಲಿ ಹಾನಿ ಅನುಭವಿಸಿದವರಲ್ಲಿ ಬಹುತೇಕರಿಗೆ ಇಂದಿಗೂ ಪರಿಹಾರ ಸಿಕ್ಕಿಲ್ಲ. ಅವರಿಗೂ ನ್ಯಾಯ ದೊರಕಿಸಿಕೊಡಬೇಕು. ತ್ವರಿತವಾಗಿ ಸಮೀಕ್ಷೆ ನಡೆಸಿ ಸಂತ್ರಸ್ತರಿಗೆ ಆಸರೆಯಾಗಿ ನಿಲ್ಲಬೇಕು’ ಎಂದು ಒತ್ತಾಯಿಸಿದರು.</p>.<p>‘ಕಲ್ಯಾಣ ಕರ್ನಾಟಕಕ್ಕೆ ನೀಡಿದಂತೆ ವಿಶೇಷ ಸ್ಥಾನಮಾನವನ್ನು ಬೆಳಗಾವಿ ವಿಭಾಗದ ಜನರಿಗೂ ಕೊಡಬೇಕು. ಕೃಷ್ಣಾ ಕಣಿವೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಬೇಕು. ಇದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಜೆಡಿಎಸ್–ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವಿದ್ದಾಗ ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ನಡೆದಿತ್ತು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇಲ್ಲಿ ಅಧಿವೇಶನ ಆಗಿಲ್ಲ. ಈ ಬಾರಿ ನಡೆಸಬೇಕು. ಈ ಭಾಗದ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಮಾಡಲಗಿ, ಭೀಮಪ್ಪ ಗಡಾದ, ನಾಸಿರ ಬಾಗವಾನ, ಎಂ.ವೈ. ಸೋಮಣ್ಣವರ, ಜಿ.ಎಸ್. ಗೋಕಾಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ‘ಜಿಲ್ಲೆಯಲ್ಲಿ ನೆರೆ ಮತ್ತು ಅತಿವೃಷ್ಟಿಯಿಂದ ಮನೆ, ಬೆಳೆ ಮೊದಲಾದವುಗಳನ್ನು ಕಳೆದುಕೊಂಡಿರುವ ಸಂತ್ರಸ್ತರಿಗೆ ಕೂಡಲೇ ಸಮರ್ಪಕ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಇಲ್ಲಿನ ರಾಣಿ ಚನ್ನಮ್ಮ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>‘2019ರಲ್ಲಿ ಹಾನಿ ಅನುಭವಿಸಿದವರಲ್ಲಿ ಬಹುತೇಕರಿಗೆ ಇಂದಿಗೂ ಪರಿಹಾರ ಸಿಕ್ಕಿಲ್ಲ. ಅವರಿಗೂ ನ್ಯಾಯ ದೊರಕಿಸಿಕೊಡಬೇಕು. ತ್ವರಿತವಾಗಿ ಸಮೀಕ್ಷೆ ನಡೆಸಿ ಸಂತ್ರಸ್ತರಿಗೆ ಆಸರೆಯಾಗಿ ನಿಲ್ಲಬೇಕು’ ಎಂದು ಒತ್ತಾಯಿಸಿದರು.</p>.<p>‘ಕಲ್ಯಾಣ ಕರ್ನಾಟಕಕ್ಕೆ ನೀಡಿದಂತೆ ವಿಶೇಷ ಸ್ಥಾನಮಾನವನ್ನು ಬೆಳಗಾವಿ ವಿಭಾಗದ ಜನರಿಗೂ ಕೊಡಬೇಕು. ಕೃಷ್ಣಾ ಕಣಿವೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಬೇಕು. ಇದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಜೆಡಿಎಸ್–ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವಿದ್ದಾಗ ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ನಡೆದಿತ್ತು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇಲ್ಲಿ ಅಧಿವೇಶನ ಆಗಿಲ್ಲ. ಈ ಬಾರಿ ನಡೆಸಬೇಕು. ಈ ಭಾಗದ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಮಾಡಲಗಿ, ಭೀಮಪ್ಪ ಗಡಾದ, ನಾಸಿರ ಬಾಗವಾನ, ಎಂ.ವೈ. ಸೋಮಣ್ಣವರ, ಜಿ.ಎಸ್. ಗೋಕಾಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>