<p><strong>ಬೆಳಗಾವಿ: </strong>‘ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರ ನಿರ್ದೇಶನದ ಮೇರೆಗೆ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಎಲ್ಲ 58 ವಾರ್ಡ್ಗಳಲ್ಲೂ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು’ ಎಂದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಮಾಡಲಗಿ ತಿಳಿಸಿದರು.</p>.<p>ಇಲ್ಲಿನ ಕನ್ನಡ ಸಾಹಿತ್ಯ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಬೆಳಗಾವಿ ಅಭಿವೃದ್ಧಿಗೆ ಕುಮಾರಸ್ವಾಮಿ ಅವರು ಅಪಾರ ಕೊಡುಗೆ ನೀಡಿದ್ದಾರೆ. ಅದನ್ನು ಜನರ ಗಮನಕ್ಕೆ ತಂದು ಪ್ರಚಾರ ಮಾಡಲಾಗುವುದು’ ಎಂದು ತಿಳಿಸಿದರು.</p>.<p>‘ನಮ್ಮ ಸರ್ಕಾರವಿದ್ದಾಗ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಸಲಾಗಿತ್ತು. ಬಳಿಕ ಬಂದ ಬಿಜೆಪಿ ಸರ್ಕಾರ ಅಧಿವೇಶನ ನಡೆಸಿಲ್ಲ. ಇದೆಲ್ಲವನ್ನೂ ತಿಳಿಸಲಾಗುವುದು. ಪ್ರಚಾರಕ್ಕೆ ಪಕ್ಷದ ವರಿಷ್ಠರು ಬೆಳಗಾವಿಗೆ ಬರುತ್ತಾರೆ’ ಎಂದು ಹೇಳಿದರು.</p>.<p>ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಪ್ರಮೋದ ಪಾಟೀಲ, ಜಿಲ್ಲಾ ಘಟಕದ ಕಾರ್ಯದರ್ಶಿ ಈರಣ್ಣ ರೇವಡಿ, ಮುಖಂಡರಾದ ಭೀಮಪ್ಪ ಗಡಾದ, ಪಿ.ಎಫ್.ಪಾಟೀಲ, ಬಿ.ಎಸ್. ರುದ್ರಗೌಡರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>‘ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರ ನಿರ್ದೇಶನದ ಮೇರೆಗೆ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಎಲ್ಲ 58 ವಾರ್ಡ್ಗಳಲ್ಲೂ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು’ ಎಂದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಮಾಡಲಗಿ ತಿಳಿಸಿದರು.</p>.<p>ಇಲ್ಲಿನ ಕನ್ನಡ ಸಾಹಿತ್ಯ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಬೆಳಗಾವಿ ಅಭಿವೃದ್ಧಿಗೆ ಕುಮಾರಸ್ವಾಮಿ ಅವರು ಅಪಾರ ಕೊಡುಗೆ ನೀಡಿದ್ದಾರೆ. ಅದನ್ನು ಜನರ ಗಮನಕ್ಕೆ ತಂದು ಪ್ರಚಾರ ಮಾಡಲಾಗುವುದು’ ಎಂದು ತಿಳಿಸಿದರು.</p>.<p>‘ನಮ್ಮ ಸರ್ಕಾರವಿದ್ದಾಗ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಸಲಾಗಿತ್ತು. ಬಳಿಕ ಬಂದ ಬಿಜೆಪಿ ಸರ್ಕಾರ ಅಧಿವೇಶನ ನಡೆಸಿಲ್ಲ. ಇದೆಲ್ಲವನ್ನೂ ತಿಳಿಸಲಾಗುವುದು. ಪ್ರಚಾರಕ್ಕೆ ಪಕ್ಷದ ವರಿಷ್ಠರು ಬೆಳಗಾವಿಗೆ ಬರುತ್ತಾರೆ’ ಎಂದು ಹೇಳಿದರು.</p>.<p>ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಪ್ರಮೋದ ಪಾಟೀಲ, ಜಿಲ್ಲಾ ಘಟಕದ ಕಾರ್ಯದರ್ಶಿ ಈರಣ್ಣ ರೇವಡಿ, ಮುಖಂಡರಾದ ಭೀಮಪ್ಪ ಗಡಾದ, ಪಿ.ಎಫ್.ಪಾಟೀಲ, ಬಿ.ಎಸ್. ರುದ್ರಗೌಡರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>