<p>ಬೆಳಗಾವಿ: ‘ಜನಮಾನಸದಿಂದ ದೂರ ಸರಿಯುತ್ತಿರುವ ಜಾನಪದ ಮತ್ತು ಧಾರ್ಮಿಕ ಗೀತೆಗಳ ಮೂಲಕ ನಮ್ಮ ಸಂಸ್ಕೃತಿಯನ್ನು ಕಾಪಾಡುವ ನಿಟ್ಟಿನಲ್ಲಿ ‘ಜಿನ ಭಜನಾ ಸ್ಪರ್ಧೆ’ಗಳನ್ನು ಆಯೋಜಿಸುವುದು ಶ್ಲಾಘನೀಯವಾಗಿದೆ‘ ಎಂದು ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಸದಸ್ಯ ಧನ್ಯಕುಮಾರ ಗುಂಡೆ ಹೇಳಿದರು.</p>.<p>ಭಾರತೀಯ ಜೈನ ಮಿಲನ ವಲಯ-8ರ ವತಿಯಿಂದ ಇಲ್ಲಿನ ರಾಮನಗರದ ಧರ್ಮನಾಥ ಭವನದಲ್ಲಿ ಆಯೋಜಿಸಿದ್ದ ಧಾರವಾಡ ವಿಭಾಗ ಮಟ್ಟದ ‘ಜಿನಭಜನಾ ಸ್ಪರ್ಧೆ’ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮೊಬೈಲ್ ಫೋನ್ ಹಾವಳಿಯಿಂದ ಜನಪದ ಮತ್ತು ಭಕ್ತಿಗೀತೆಗಳು ನಶಿಸಿ ಹೋಗುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ಜಿನಭಕ್ತಿ ಗೀತೆಗಳು, ಜೈನ ಆರತಿ ಪದಗಳು, ಸೋಬಾನೆ ಪದಗಳು, ಜಾನಪದ ಗೀತೆಗಳನ್ನು ಪುನಶ್ಚೇತನಗೊಳಿಸಿ ಮುಂದಿನ ಪಿಳಿಗೆಗೆ ಉಡುಗೊರೆಯಾಗಿ ನೀಡುವ ದೃಷ್ಷಿ ಹೊಂದಿರುವುದು ಮಾದರಿಯಾಗಿದೆ’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಭರತೇಶ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ವಿನೋದ ದೊಡ್ಡಣ್ಣವರ, ‘ಜಿನ ಭಜನಾ ಸ್ಪರ್ಧೆಯ ಮೂಲಕ ಇಂದು ಮನೆ ಮನೆಗಳಲ್ಲಿ ಧಾರ್ಮಿಕ ವಾತಾವರಣ ಮೂಡುತ್ತಿದೆ. ಈ ರೀತಿಯ ಕಾರ್ಯಕ್ರಮಗಳು ಸಮಾಜದ ಅಭಿವೃದ್ಧಿಗೆ ಪೂರಕವಾಗಿವೆ’ ಎಂದು ನುಡಿದರು.</p>.<p><br />ಮಾಣಿಕಬಾಗ ದಿಗಂಬರ ಜೈನ ಬೋರ್ಡಿಂಗ್ ಅಧ್ಯಕ್ಷ ಪುಷ್ಪಕ ಹನಮಣ್ಣವರ, ಡಾ.ಪಿ.ಜಿ. ಕೆಂಪಣ್ಣವರ ಮಾತನಾಡಿದರು.</p>.<p>ಧಾರವಾಡ ವಲಯದ ಅಧ್ಯಕ್ಷ ಜೀವಂಧರ ಕುಮಾರ, ಗೌರವ ಅಧ್ಯಕ್ಷ ಗುಣಪಾಲ ಹೆಗ್ಗಡೆ, ಕೆಜಿಎ ಸದಸ್ಯ ಅಶೋಕ ಜೈನ, ಸನ್ಮತಿ ಕಸ್ತೂರಿ, ಮಹಾಮಿತ್ರ ಉಪಾಧ್ಯ, ಪ್ರಶಾಂತ ಉಪಾಧ್ಯೆ, ಎಸ್.ಎಂ. ಕಗಣಗೌಡ್ರ, ಡಾ.ಉದಯಾ ಪಾಟೀಲ, ಅಣ್ಣಾಸಾಹೇಬ ಚೌಗುಲೆ ಇದ್ದರು.</p>.<p>ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಕುಂತಿನಾಥ ಕಲಮನಿ ಹಾಗೂ ಪದ್ಮರಾಜ ವೈಜಣ್ಣವರ ಅವರನ್ನು ಸತ್ಕರಿಸಲಾಯಿತು.</p>.<p>ಜೈನ ಮಿಲನ ಮಧ್ಯವರ್ತಿ ಸಮಿತಿಯ ಕಾರ್ಯದರ್ಶಿ ಡಾ.ನಾಗರಾಜ ಮರೆಣ್ನವರ ಸ್ವಾಗತಿಸಿದರು. ನಮಿತಾ ಪರಮಾಜ ನಿರೂಪಿಸಿದರು. ಅಜಿತ ಕುಮಾರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ‘ಜನಮಾನಸದಿಂದ ದೂರ ಸರಿಯುತ್ತಿರುವ ಜಾನಪದ ಮತ್ತು ಧಾರ್ಮಿಕ ಗೀತೆಗಳ ಮೂಲಕ ನಮ್ಮ ಸಂಸ್ಕೃತಿಯನ್ನು ಕಾಪಾಡುವ ನಿಟ್ಟಿನಲ್ಲಿ ‘ಜಿನ ಭಜನಾ ಸ್ಪರ್ಧೆ’ಗಳನ್ನು ಆಯೋಜಿಸುವುದು ಶ್ಲಾಘನೀಯವಾಗಿದೆ‘ ಎಂದು ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಸದಸ್ಯ ಧನ್ಯಕುಮಾರ ಗುಂಡೆ ಹೇಳಿದರು.</p>.<p>ಭಾರತೀಯ ಜೈನ ಮಿಲನ ವಲಯ-8ರ ವತಿಯಿಂದ ಇಲ್ಲಿನ ರಾಮನಗರದ ಧರ್ಮನಾಥ ಭವನದಲ್ಲಿ ಆಯೋಜಿಸಿದ್ದ ಧಾರವಾಡ ವಿಭಾಗ ಮಟ್ಟದ ‘ಜಿನಭಜನಾ ಸ್ಪರ್ಧೆ’ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮೊಬೈಲ್ ಫೋನ್ ಹಾವಳಿಯಿಂದ ಜನಪದ ಮತ್ತು ಭಕ್ತಿಗೀತೆಗಳು ನಶಿಸಿ ಹೋಗುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ಜಿನಭಕ್ತಿ ಗೀತೆಗಳು, ಜೈನ ಆರತಿ ಪದಗಳು, ಸೋಬಾನೆ ಪದಗಳು, ಜಾನಪದ ಗೀತೆಗಳನ್ನು ಪುನಶ್ಚೇತನಗೊಳಿಸಿ ಮುಂದಿನ ಪಿಳಿಗೆಗೆ ಉಡುಗೊರೆಯಾಗಿ ನೀಡುವ ದೃಷ್ಷಿ ಹೊಂದಿರುವುದು ಮಾದರಿಯಾಗಿದೆ’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಭರತೇಶ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ವಿನೋದ ದೊಡ್ಡಣ್ಣವರ, ‘ಜಿನ ಭಜನಾ ಸ್ಪರ್ಧೆಯ ಮೂಲಕ ಇಂದು ಮನೆ ಮನೆಗಳಲ್ಲಿ ಧಾರ್ಮಿಕ ವಾತಾವರಣ ಮೂಡುತ್ತಿದೆ. ಈ ರೀತಿಯ ಕಾರ್ಯಕ್ರಮಗಳು ಸಮಾಜದ ಅಭಿವೃದ್ಧಿಗೆ ಪೂರಕವಾಗಿವೆ’ ಎಂದು ನುಡಿದರು.</p>.<p><br />ಮಾಣಿಕಬಾಗ ದಿಗಂಬರ ಜೈನ ಬೋರ್ಡಿಂಗ್ ಅಧ್ಯಕ್ಷ ಪುಷ್ಪಕ ಹನಮಣ್ಣವರ, ಡಾ.ಪಿ.ಜಿ. ಕೆಂಪಣ್ಣವರ ಮಾತನಾಡಿದರು.</p>.<p>ಧಾರವಾಡ ವಲಯದ ಅಧ್ಯಕ್ಷ ಜೀವಂಧರ ಕುಮಾರ, ಗೌರವ ಅಧ್ಯಕ್ಷ ಗುಣಪಾಲ ಹೆಗ್ಗಡೆ, ಕೆಜಿಎ ಸದಸ್ಯ ಅಶೋಕ ಜೈನ, ಸನ್ಮತಿ ಕಸ್ತೂರಿ, ಮಹಾಮಿತ್ರ ಉಪಾಧ್ಯ, ಪ್ರಶಾಂತ ಉಪಾಧ್ಯೆ, ಎಸ್.ಎಂ. ಕಗಣಗೌಡ್ರ, ಡಾ.ಉದಯಾ ಪಾಟೀಲ, ಅಣ್ಣಾಸಾಹೇಬ ಚೌಗುಲೆ ಇದ್ದರು.</p>.<p>ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಕುಂತಿನಾಥ ಕಲಮನಿ ಹಾಗೂ ಪದ್ಮರಾಜ ವೈಜಣ್ಣವರ ಅವರನ್ನು ಸತ್ಕರಿಸಲಾಯಿತು.</p>.<p>ಜೈನ ಮಿಲನ ಮಧ್ಯವರ್ತಿ ಸಮಿತಿಯ ಕಾರ್ಯದರ್ಶಿ ಡಾ.ನಾಗರಾಜ ಮರೆಣ್ನವರ ಸ್ವಾಗತಿಸಿದರು. ನಮಿತಾ ಪರಮಾಜ ನಿರೂಪಿಸಿದರು. ಅಜಿತ ಕುಮಾರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>