ಕೇಂದ್ರದ ಸಂಚಾಲಕ ವಿಕ್ರಮ ಜೈನ ಮಾತನಾಡಿ, ‘ಇಲ್ಲಿ 15 ಹಾಸಿಗೆಗಳಿವೆ. ಆಮ್ಲಜನಕ ಕೊರತೆ ಎದುರಿಸುವ ಸೋಂಕಿತರಿಗೆ ವೈದ್ಯರ ಸಲಹೆ ಮೇರೆಗೆ 5 ಗಂಟೆಗಳ ಕಾಲ ಒದಗಿಸುವ ವ್ಯವಸ್ಥೆ ಮಾಡಲಾಗಿದೆ. ಅಂಬುಲೆನ್ಸ್ ಇದೆ. ದಿನದ 24 ಗಂಟೆಯೂ ವೈದ್ಯಕೀಯ ಸೇವೆ ಒದಗಿಸಲಾಗುವುದು. ಮಧ್ಯಾಹ್ನ ಮತ್ತು ರಾತ್ರಿ ಊಟದ ವ್ಯವಸ್ಥೆ ಇದೆ. ಈ ಎಲ್ಲ ಸೇವೆಗಳನ್ನೂ ಜಿತೋ ಸಂಸ್ಥೆಯಿಂದ ಉಚಿತವಾಗಿ ಮಾಡಲಾಗುತ್ತಿದೆ. ಬಿ.ಟಿ. ಪಾಟೀಲ ಕಂಪನಿಯ ರಮೇಶ ಶಹಾ, ಜೈನ ಯುವ ಮಂಡಳ, ಮಹಾವೀರ ಭವನ ಸೇರಿದಂತೆ ಅನೇಕ ದಾನಿಗಳು ಸಹಾಯ ಹಸ್ತ ಚಾಚಿದ್ದರಿಂದ ಈ ಯೋಜನೆ ಅನುಷ್ಠಾನಗೊಳಿಸಲಾಗಿದೆ’ ಎಂದು ಮಾಹಿತಿ ನೀಡಿದರು.