ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕ ಗುರುಪಾದಯ್ಯ ಹಿರೇಮಠ, ‘ಕೋವಿಡ್–19 ಕಾರಣದಿಂದಾಗಿ ದೇಶದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. ಯೋಗ್ಯ ಅಭ್ಯರ್ಥಿಗಳಿಗೆ ಯೋಗ್ಯ ನೌಕರಿಗಳು ದೊರೆಯಬೇಕು ಎನ್ನುವುದು ನಮ್ಮ ಆಶಯ. ಹೀಗಾಗಿ, ಮೇಳ ಆಯೋಜಿಸುವ ಮೂಲಕ ಆಕಾಂಕ್ಷಿಗಳು– ಕಂಪನಿಗಳ ನಡುವೆ ಸೇತುವೆಯಾಗಿ ನಾವು ಕಾರ್ಯನಿರ್ವಹಿಸುತ್ತಿದ್ದೇವೆ. ಎಲ್ಲರೂ ವೇತನವನ್ನು ಹೆಚ್ಚು ನಿರೀಕ್ಷೆ ಮಾಡುತ್ತಾರೆ. ಆದರೆ, ವೇತನ ಪಡೆದುಕೊಳ್ಳಲು ಬೇಕಾದ ಅರ್ಹತೆಯನ್ನು ಗಳಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.