<p>ಪರಮಾನಂದವಾಡಿ: ರಾಜಸ್ಥಾನದ ಜೋಧಪುರದಲ್ಲಿ 74ನೇ ಫೀಲ್ಡ್ ರೆಜಿಮೆಂಟಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಅಪಘಾತದಲ್ಲಿ ಸಾವನ್ನಪ್ಪಿದ ಗ್ರಾಮದ ವೀರಯೋಧ ಬಸವರಾಜ ಕಲ್ಮೇಶ್ವರ ವಾಳಕೆ (45) ಅವರ ಅಂತ್ಯಕ್ರಿಯೆ ಗುರುವಾರ ಮಿಲಿಟರಿ ಗೌರವಗಳೊಂದಿಗೆ ನೆರವೇರಿತು.</p>.<p>ಈಚೆಗೆ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಅವರನ್ನು ದೆಹಲಿಯ ಬೇಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಬುಧವಾರ ಕೊನೆಯುಸಿರೆಳೆದರು. 23 ವರ್ಷಗಳಿಂದ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಯೋಧನಿಗೆ ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರರು ಇದ್ದಾರೆ.</p>.<p>ಪಾರ್ಥಿವ ಶರೀರ ಗ್ರಾಮಕ್ಕೆ ಆಗಮಿಸಿದಾಗ ಗ್ರಾಮಸ್ಥರಿಂದ ಮತ್ತು ನಿವೃತ್ತ ಯೋಧರು ಬರಮಾಡಿ ಕೊಂಡರು. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಶಾಲಾ ಮಕ್ಕಳು ರಸ್ತೆಯುದ್ದಕ್ಕೂ ಪುಷ್ಪವೃಷ್ಟಿ ಮಾಡಿ ಗೌರವ ಸಲ್ಲಿಸಿದರು.</p>.<p>ಭಾರತ ಮಾತಾ ಕಿ ಜೈ, ಬಸವರಾಜ ಅಮರ ರಹೆ, ಮತ್ತೆ ಹುಟ್ಟಿ ಬಾ ಎಂದು ಘೋಷಣೆಗಳು ಮೊಳಗಿದವು. ಗ್ರಾಮ ಪಂಚಾಯಿತಿ ಮತ್ತು ತಾಲ್ಲೂಕು ಆಡಳಿತದ ವತಿಯಿಂದ ಅಂತಿಮ ಗೌರವ ಸಲ್ಲಿಸಿದರು.</p>.<p>ಯೋಧನ ಗೌರವಾರ್ಥ ಗ್ರಾಮದಲ್ಲಿ ವ್ಯಾಪಾರ– ವಹಿವಾಟುಗಳನ್ನು ಸ್ವಯಂಪ್ರೇರಣೆಯಿಂದ ಬಂದ್ ಮಾಡಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260328-21-1533348062</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪರಮಾನಂದವಾಡಿ: ರಾಜಸ್ಥಾನದ ಜೋಧಪುರದಲ್ಲಿ 74ನೇ ಫೀಲ್ಡ್ ರೆಜಿಮೆಂಟಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಅಪಘಾತದಲ್ಲಿ ಸಾವನ್ನಪ್ಪಿದ ಗ್ರಾಮದ ವೀರಯೋಧ ಬಸವರಾಜ ಕಲ್ಮೇಶ್ವರ ವಾಳಕೆ (45) ಅವರ ಅಂತ್ಯಕ್ರಿಯೆ ಗುರುವಾರ ಮಿಲಿಟರಿ ಗೌರವಗಳೊಂದಿಗೆ ನೆರವೇರಿತು.</p>.<p>ಈಚೆಗೆ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಅವರನ್ನು ದೆಹಲಿಯ ಬೇಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಬುಧವಾರ ಕೊನೆಯುಸಿರೆಳೆದರು. 23 ವರ್ಷಗಳಿಂದ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಯೋಧನಿಗೆ ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರರು ಇದ್ದಾರೆ.</p>.<p>ಪಾರ್ಥಿವ ಶರೀರ ಗ್ರಾಮಕ್ಕೆ ಆಗಮಿಸಿದಾಗ ಗ್ರಾಮಸ್ಥರಿಂದ ಮತ್ತು ನಿವೃತ್ತ ಯೋಧರು ಬರಮಾಡಿ ಕೊಂಡರು. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಶಾಲಾ ಮಕ್ಕಳು ರಸ್ತೆಯುದ್ದಕ್ಕೂ ಪುಷ್ಪವೃಷ್ಟಿ ಮಾಡಿ ಗೌರವ ಸಲ್ಲಿಸಿದರು.</p>.<p>ಭಾರತ ಮಾತಾ ಕಿ ಜೈ, ಬಸವರಾಜ ಅಮರ ರಹೆ, ಮತ್ತೆ ಹುಟ್ಟಿ ಬಾ ಎಂದು ಘೋಷಣೆಗಳು ಮೊಳಗಿದವು. ಗ್ರಾಮ ಪಂಚಾಯಿತಿ ಮತ್ತು ತಾಲ್ಲೂಕು ಆಡಳಿತದ ವತಿಯಿಂದ ಅಂತಿಮ ಗೌರವ ಸಲ್ಲಿಸಿದರು.</p>.<p>ಯೋಧನ ಗೌರವಾರ್ಥ ಗ್ರಾಮದಲ್ಲಿ ವ್ಯಾಪಾರ– ವಹಿವಾಟುಗಳನ್ನು ಸ್ವಯಂಪ್ರೇರಣೆಯಿಂದ ಬಂದ್ ಮಾಡಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260328-21-1533348062</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>