‘ಚಿರತೆ ಕಾಣಿಸಿಕೊಂಡಿದೆ ಎಂಬ ವದಂತಿಯ ಹಿನ್ನೆಲೆಯಲ್ಲಿ ನಿಗದಿತ ಪ್ರದೇಶದಲ್ಲಿ ಅಂದು ಬೆಳಿಗ್ಗೆಯಿಂದ ಸಂಜೆವರೆಗೂ ಪರಿಶೀಲನೆ ನಡೆಸಲಾಗಿತ್ತು. ಸಂಜೆ ಎರಡು ಕಡೆಗಳಲ್ಲಿ ಕುರಿ ಮತ್ತು ನಾಯಿ ಇದ್ದ ಬೋನುಗಳನ್ನು ಇಡಲಾಗಿತ್ತು. 5 ಕಡೆಗಳಲ್ಲಿ ಕ್ಯಾಮೆರಾಗಳನ್ನು ಕೂಡ ಅಳವಡಿಸಲಾಗಿತ್ತು. ಗಾಲ್ಫ್ ಮೈದಾನಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿತ್ತು. ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯಗಳನ್ನು ಗಮನಿಸಿದಾಗ, ಆ ಭಾಗದಲ್ಲಿ ಕಾಡು ಬೆಕ್ಕು ಸಂಚರಿಸಿರುವುದು ಕಂಡುಬಂದಿದೆ. ಅದನ್ನು ದೃಢಪಡಿಸಿಕೊಳ್ಳಲಾಗಿದೆ’ಎಂದು ಆರ್ಎಫ್ಒ ಶಿವಾನಂದ ಮಗದುಮ್ ‘ಪ್ರಜಾವಾಣಿ’ಗೆ ತಿಳಿಸಿದರು.