<p><strong>ಬೆಳಗಾವಿ:</strong> ‘ಇಲ್ಲಿನ ಕ್ಯಾಂಪ್ ಪ್ರದೇಶದಲ್ಲಿರುವ ಗಾಲ್ಫ್ ಕೋರ್ಸ್ ಮೈದಾನದ ಬಳಿ ಗುರುವಾರ ಮುಂಜಾನೆ ವಾಯುವಿಹಾರಿಗಳಿಗೆ ಕಾಣಿಸಿಕೊಂಡಿದ್ದು ಚಿರತೆಯಲ್ಲ; ಅದು ದೊಡ್ಡ ಕಾಡು ಬೆಕ್ಕು’ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಭಾನುವಾರ ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಆ ಭಾಗದ ಜನರಲ್ಲಿ ಉಂಟಾಗಿದ್ದ ಆತಂಕ ದೂರಾದಂತಾಗಿದೆ.</p>.<p>‘ಚಿರತೆ ಕಾಣಿಸಿಕೊಂಡಿದೆ ಎಂಬ ವದಂತಿಯ ಹಿನ್ನೆಲೆಯಲ್ಲಿ ನಿಗದಿತ ಪ್ರದೇಶದಲ್ಲಿ ಅಂದು ಬೆಳಿಗ್ಗೆಯಿಂದ ಸಂಜೆವರೆಗೂ ಪರಿಶೀಲನೆ ನಡೆಸಲಾಗಿತ್ತು. ಸಂಜೆ ಎರಡು ಕಡೆಗಳಲ್ಲಿ ಕುರಿ ಮತ್ತು ನಾಯಿ ಇದ್ದ ಬೋನುಗಳನ್ನು ಇಡಲಾಗಿತ್ತು. 5 ಕಡೆಗಳಲ್ಲಿ ಕ್ಯಾಮೆರಾಗಳನ್ನು ಕೂಡ ಅಳವಡಿಸಲಾಗಿತ್ತು. ಗಾಲ್ಫ್ ಮೈದಾನಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿತ್ತು. ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯಗಳನ್ನು ಗಮನಿಸಿದಾಗ, ಆ ಭಾಗದಲ್ಲಿ ಕಾಡು ಬೆಕ್ಕು ಸಂಚರಿಸಿರುವುದು ಕಂಡುಬಂದಿದೆ. ಅದನ್ನು ದೃಢಪಡಿಸಿಕೊಳ್ಳಲಾಗಿದೆ’ಎಂದು ಆರ್ಎಫ್ಒ ಶಿವಾನಂದ ಮಗದುಮ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಆ ಪ್ರದೇಶದಲ್ಲಿ ಚಿರತೆಯ ಹೆಜ್ಜೆ ಗುರುತು ಕೂಡ ಕಂಡುಬಂದಿಲ್ಲ. ಜನರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ’ ಎಂದರು.</p>.<p>ಡಿಸಿಎಫ್ ಹರ್ಷಬಾನು, ಎಸಿಎಫ್ ಎಂ.ಬಿ. ಕುಸನಾಳ, ಆರ್ಎಫ್ಒಗಳಾದ ಶಿವಾನಂದ ಮಗದುಮ್ ಮತ್ತು ನಾಗರಾಜ ಭೀಮಗೋಳ ನೇತೃತ್ವದಲ್ಲಿ ಸಿಬ್ಬಂದಿ ಪರಿಶೀಲನೆ ನಡೆಸಿದ್ದರು. ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಇಲ್ಲಿನ ಕ್ಯಾಂಪ್ ಪ್ರದೇಶದಲ್ಲಿರುವ ಗಾಲ್ಫ್ ಕೋರ್ಸ್ ಮೈದಾನದ ಬಳಿ ಗುರುವಾರ ಮುಂಜಾನೆ ವಾಯುವಿಹಾರಿಗಳಿಗೆ ಕಾಣಿಸಿಕೊಂಡಿದ್ದು ಚಿರತೆಯಲ್ಲ; ಅದು ದೊಡ್ಡ ಕಾಡು ಬೆಕ್ಕು’ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಭಾನುವಾರ ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಆ ಭಾಗದ ಜನರಲ್ಲಿ ಉಂಟಾಗಿದ್ದ ಆತಂಕ ದೂರಾದಂತಾಗಿದೆ.</p>.<p>‘ಚಿರತೆ ಕಾಣಿಸಿಕೊಂಡಿದೆ ಎಂಬ ವದಂತಿಯ ಹಿನ್ನೆಲೆಯಲ್ಲಿ ನಿಗದಿತ ಪ್ರದೇಶದಲ್ಲಿ ಅಂದು ಬೆಳಿಗ್ಗೆಯಿಂದ ಸಂಜೆವರೆಗೂ ಪರಿಶೀಲನೆ ನಡೆಸಲಾಗಿತ್ತು. ಸಂಜೆ ಎರಡು ಕಡೆಗಳಲ್ಲಿ ಕುರಿ ಮತ್ತು ನಾಯಿ ಇದ್ದ ಬೋನುಗಳನ್ನು ಇಡಲಾಗಿತ್ತು. 5 ಕಡೆಗಳಲ್ಲಿ ಕ್ಯಾಮೆರಾಗಳನ್ನು ಕೂಡ ಅಳವಡಿಸಲಾಗಿತ್ತು. ಗಾಲ್ಫ್ ಮೈದಾನಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿತ್ತು. ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯಗಳನ್ನು ಗಮನಿಸಿದಾಗ, ಆ ಭಾಗದಲ್ಲಿ ಕಾಡು ಬೆಕ್ಕು ಸಂಚರಿಸಿರುವುದು ಕಂಡುಬಂದಿದೆ. ಅದನ್ನು ದೃಢಪಡಿಸಿಕೊಳ್ಳಲಾಗಿದೆ’ಎಂದು ಆರ್ಎಫ್ಒ ಶಿವಾನಂದ ಮಗದುಮ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಆ ಪ್ರದೇಶದಲ್ಲಿ ಚಿರತೆಯ ಹೆಜ್ಜೆ ಗುರುತು ಕೂಡ ಕಂಡುಬಂದಿಲ್ಲ. ಜನರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ’ ಎಂದರು.</p>.<p>ಡಿಸಿಎಫ್ ಹರ್ಷಬಾನು, ಎಸಿಎಫ್ ಎಂ.ಬಿ. ಕುಸನಾಳ, ಆರ್ಎಫ್ಒಗಳಾದ ಶಿವಾನಂದ ಮಗದುಮ್ ಮತ್ತು ನಾಗರಾಜ ಭೀಮಗೋಳ ನೇತೃತ್ವದಲ್ಲಿ ಸಿಬ್ಬಂದಿ ಪರಿಶೀಲನೆ ನಡೆಸಿದ್ದರು. ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>