‘ಮೂಡಡಲಗಿ ಪುರಸಭೆಯಲ್ಲಿ ಹೈಮಾಸ್ಟ್ ಬೀದಿದೀಪದ ಕಂಬಗಳನ್ನು ಅಳವಡಿಸುವ ಕಾಮಗಾರಿಯಲ್ಲಿ ಸರ್ಕಾರ ನಿಗದಿಪಡಿಸಿದ ದರ (ಎಸ್.ಆರ್. ರೇಟ್)ಕ್ಕಿಂತ ಹೆಚ್ಚಿನ ದರದ ಅಂದಾಜು ಪತ್ರಿಕೆ ತಯಾರಿಸಿ ಸರ್ಕಾರದ ಹಣ ದುರುಪಯೋಗ ಮಾಡಲಾಗಿದೆ. ಈ ತನಿಖೆ ನಡೆಸಿ, ಇದಕ್ಕೆ ಕಾರಣವಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಅವರು ಪೌರಾಡಳಿತ ಇಲಾಖೆ ನಿರ್ದೇಶಕರಿಗೆ ಆ. 27ರಂದು ದೂರು ಸಲ್ಲಿಸಿದ್ದರು.