‘ಆರೋಪಿ ಗಂಗಾ ಮನೆಯಲ್ಲಿ ಅಡುಗೆ ಕೆಲಸಕ್ಕೆಂದು ಸೇರಿಕೊಂಡಿದ್ದರು. ಕುಟುಂಬದವರ ಸ್ನೇಹ ಬೆಳೆಸಿದ್ದರು. ಶಿವಾನಂದನನ್ನೂ ಪರಿಚಯಿಸಿದ್ದರು. ಆ ಇಬ್ಬರೂ ಸೇರಿ ಪತ್ನಿ ಅಶ್ವಿನಿ, ಅತ್ತೆ ರಾಧಿಕಾ ಸಾತ್ವಿಕ್ ಹಾಗೂ ಮಾವ ಕೃಷ್ಣ ಸಾತ್ವಿಕ್ ಅವರನ್ನು ಪುಸಲಾಯಿಸಿ ಮೋಸ ಮಾಡಿದ್ದಾರೆ. ಮೂವರ ಬ್ಯಾಂಕ್ ಖಾತೆಯಿಂದ ಶಿವಾನಂದ ಅವರ ಖಾತೆಗೆ ₹ 19.80 ಲಕ್ಷ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಅವರ ಹೆಸರಿನಲ್ಲಿ ಜಂಟಿ ಖಾತೆಯಲ್ಲಿದ್ದ ಸಿಟಿಎಸ್ ನಂ.1096/ಎ ನಿವೇಶನವನ್ನು ತನ್ನ ಹೆಸರಿಗೆ ಮಾಡಿಸಿಕೊಂಡು ಮೋಸ ಎಸಗಿದ್ದಾರೆ. ಮೂವರನ್ನೂ ಅಪಹರಿಸಿ ಗೌಪ್ಯವಾಗಿಟ್ಟು ವ್ಯವಹರಿಸಿದ್ದಾರೆ’ ಎಂದು ಕಲ್ಯಾಣ ದೂರು ನೀಡಿದ್ದಾರೆ.