ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾನಗರ ಪಾಲಿಕೆಗಳಿಗೆ ಈಗ ಚುನಾವಣೆ ನಡೆಸುವ ಅಗತ್ಯವೇನಿದೆ?: ಈಶ್ವರಪ್ಪ

Last Updated 11 ಆಗಸ್ಟ್ 2021, 14:50 IST
ಅಕ್ಷರ ಗಾತ್ರ

ಬೆಳಗಾವಿ: ‘ಕೋವಿಡ್ 3ನೇ ಅಲೆಯ ಭೀತಿಯ ನಡುವೆ ಮಹಾನಗರಪಾಲಿಕೆಗಳಿಗೆ ಚುನಾವಣೆ ನಡೆಸುವ ಅಗತ್ಯತೆವೇನಿದೆ?’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೆ.ಎಸ್. ಈಶ್ವರಪ್ಪ ಕೇಳಿದರು.

ಇಲ್ಲಿ ಪತ್ರಕರ್ತರೊಂದಿಗೆ ಬುಧವಾರ ಮಾತನಾಡಿದ ಅವರು, ‘ಡಿಸೆಂಬರ್‌ವರೆಗೂ ಯಾವುದೇ ಚುನಾವಣೆ ನಡೆಸದಿರಲು ಸಚಿವ ಸಂಪಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಜಾಗ್ರತೆ ವಹಿಸಬೇಕು ಎಂದು ಪ್ರಧಾನಿ ಹೇಳುತ್ತಿದ್ದಾರೆ. ನ್ಯಾಯಾಲಯಗಳೂ ತಿಳಿಸುತ್ತಿವೆ. ಹೀಗಿರುವಾಗ ಆಯೋಗ ಚುನಾವಣೆಗೆ ಘೋಷಿಸಿದರೆ ಯಾರಿಗೆ ಕೇಳೋಣ?’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ರಾಜಕೀಯ ಪಕ್ಷವಾಗಿ ಚುನಾವಣೆ ಎದುರಿಸಲು ಸಿದ್ಧವಿದ್ದೇವೆ. ಆದರೆ, ಈಗಲೇ ನಡೆಸುವ ತುರ್ತೇನಿದೆ?’ ಎಂದು ಕೇಳಿದರು.

‘ತಾಲ್ಲೂಕು ಪಂಚಾಯ್ತಿಗಳನ್ನು ರದ್ದುಪಡಿಸಲು ಬರುವುದಿಲ್ಲ’ ಎಂದು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT