ತೈಲ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ ನಂತರ ಲಕ್ಷ್ಮಿ ಅವರು ಇದಕ್ಕೆ ಪ್ರತಿಕ್ರಿಯೆ ನೀಡಿದ್ದು, ‘ನನ್ನ ಕ್ಷೇತ್ರದಲ್ಲಿ ನಾನು ಬಿಜಿಯಾಗಿರುತ್ತೇನೆ. ಯಾರ್ಯಾರೋ, ಏನೇನೊ ಹೇಳಿಕೆ ಕೊಡ್ತಾರಂತ ನಾನು ಪ್ರತಿಕ್ರಿಯಿಸಲ್ಲ. ಅದೊಂದು ಬೇಜವಾಬ್ದಾರಿ ಹೇಳಿಕೆ, ಚೈಲ್ಡಿಶ್ ಹೇಳಿಕೆಗಳಿಗೆ ಪ್ರತಿಕ್ರಿಯಿಸಲ್ಲ’ ಎಂದರು.