<p>ಕಾಗವಾಡ: ತಾಲ್ಲೂಕಿನ ಶಿರುಗುಪ್ಪಿ ಗ್ರಾಮದ ಶಿವಶಕ್ತಿ ವೀಲ್ರ್ಸ್ ಟೈರ್ ಅಂಗಡಿಗೆ ಶಾರ್ಟ್ ಸರ್ಕಿಟ್ನಿಂದಾಗಿ ಬೆಂಕಿ ತಗಲಿದ್ದು, ಎಲ್ಲ ಸಾಮಾನುಗಳು ಅಗ್ನಿಗಾಹುತಿಯಾಗಿವೆ. ಅಂದಾಜು ₹45 ಲಕ್ಷ ಮತ್ತು ಅದರ ಪಕ್ಕದಲ್ಲಿರುವ ಜೀವನ ಆಗ್ರೋಟೆಕ್ ಗೊಬ್ಬರ ಹಾಗೂ ಬೆಳೆಗಳಿಗೆ ಸಿಂಪಡಿಸುವ ಔಷಧ ಅಂಗಡಿಗೆ ಬೆಂಕಿಯ ಝಳ ತಾಗಿ ಅಲ್ಲಿದ್ದ ರಸಗೊಬ್ಬರ ಮತ್ತು ಬೆಳೆಗಳಿಗೆ ಸಿಂಪಡಿಸುವ ಔಷಧ ಸೇರಿ ಅಂದಾಜು ₹40 ಲಕ್ಷ ಸೇರಿ ಸುಮಾರು ₹85 ಲಕ್ಷ ಮೊತ್ತದಷ್ಟು ಹಾನಿ ಸಂಭವಿಸಿದೆ.</p>.<p>ಶುಕ್ರವಾರ ಬೆಳಿಗ್ಗೆ ಗ್ರಾಮದಲ್ಲಿರುವ ಅನೀಲ ಖಂಡು ಮಾಳಿ ಅವರ ಒಡೆತನದ ಶಿವಶಕ್ತಿ ವೀಲ್ರ್ಸ್ ಟೈರ್ ಅಂಗಡಿಗೆ ಶಾರ್ಟ್ ಸರ್ಕಿಟ್ನಿಂದಾಗಿ ಬೆಂಕಿ ತಗಲಿದೆ ಅದರಲ್ಲಿ ಇರುವ ಎರಡು ಮಾರುತಿ ಕಾರುಗಳು, ಯಂತ್ರೋಪಕರಣಗಳು ಸೇರಿದಂತೆ ಸುಮಾರು ₹45 ಲಕ್ಷದಷ್ಟು ಹಾನಿಯಾಗಿದೆ.</p>.<p>ಅಗ್ನಿ ನಂದಿಸಲು ಸ್ಥಳೀಯರು ಮತ್ತು ರಾಯಬಾಗ, ಉಗಾರ, ಚಿಕ್ಕೋಡಿ, ನಿಪ್ಪಾಣಿಯಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸಿದರು. ಕಾಗವಾಡ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾಗವಾಡ: ತಾಲ್ಲೂಕಿನ ಶಿರುಗುಪ್ಪಿ ಗ್ರಾಮದ ಶಿವಶಕ್ತಿ ವೀಲ್ರ್ಸ್ ಟೈರ್ ಅಂಗಡಿಗೆ ಶಾರ್ಟ್ ಸರ್ಕಿಟ್ನಿಂದಾಗಿ ಬೆಂಕಿ ತಗಲಿದ್ದು, ಎಲ್ಲ ಸಾಮಾನುಗಳು ಅಗ್ನಿಗಾಹುತಿಯಾಗಿವೆ. ಅಂದಾಜು ₹45 ಲಕ್ಷ ಮತ್ತು ಅದರ ಪಕ್ಕದಲ್ಲಿರುವ ಜೀವನ ಆಗ್ರೋಟೆಕ್ ಗೊಬ್ಬರ ಹಾಗೂ ಬೆಳೆಗಳಿಗೆ ಸಿಂಪಡಿಸುವ ಔಷಧ ಅಂಗಡಿಗೆ ಬೆಂಕಿಯ ಝಳ ತಾಗಿ ಅಲ್ಲಿದ್ದ ರಸಗೊಬ್ಬರ ಮತ್ತು ಬೆಳೆಗಳಿಗೆ ಸಿಂಪಡಿಸುವ ಔಷಧ ಸೇರಿ ಅಂದಾಜು ₹40 ಲಕ್ಷ ಸೇರಿ ಸುಮಾರು ₹85 ಲಕ್ಷ ಮೊತ್ತದಷ್ಟು ಹಾನಿ ಸಂಭವಿಸಿದೆ.</p>.<p>ಶುಕ್ರವಾರ ಬೆಳಿಗ್ಗೆ ಗ್ರಾಮದಲ್ಲಿರುವ ಅನೀಲ ಖಂಡು ಮಾಳಿ ಅವರ ಒಡೆತನದ ಶಿವಶಕ್ತಿ ವೀಲ್ರ್ಸ್ ಟೈರ್ ಅಂಗಡಿಗೆ ಶಾರ್ಟ್ ಸರ್ಕಿಟ್ನಿಂದಾಗಿ ಬೆಂಕಿ ತಗಲಿದೆ ಅದರಲ್ಲಿ ಇರುವ ಎರಡು ಮಾರುತಿ ಕಾರುಗಳು, ಯಂತ್ರೋಪಕರಣಗಳು ಸೇರಿದಂತೆ ಸುಮಾರು ₹45 ಲಕ್ಷದಷ್ಟು ಹಾನಿಯಾಗಿದೆ.</p>.<p>ಅಗ್ನಿ ನಂದಿಸಲು ಸ್ಥಳೀಯರು ಮತ್ತು ರಾಯಬಾಗ, ಉಗಾರ, ಚಿಕ್ಕೋಡಿ, ನಿಪ್ಪಾಣಿಯಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸಿದರು. ಕಾಗವಾಡ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>