‘ಕಾಂಗ್ರೆಸ್ನಿಂದ ಆಯ್ಕೆಯಾಗಿ ರಾಜೀನಾಮೆ ನೀಡುವ ಮೂಲಕ ಅನರ್ಹಗೊಂಡಿರುವ ಶ್ರೀಮಂತ ಪಾಟೀಲ ಪಕ್ಷಕ್ಕೆ ಮತ್ತು ಕ್ಷೇತ್ರದ ಜನರಿಗೆ ಮೋಸ ಮಾಡಿದ್ದಾರೆ. ಹೀಗಾಗಿ, ಜನರು ಈ ಉಪ ಚುನಾವಣೆ ಮೂಲಕ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ. ತಾವು ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾಗಿ, ಕ್ಷೇತ್ರವನ್ನು ಮಾದರಿಯಾಗಿಸಲು ಸಂಕಲ್ಪ ಮಾಡಿರುವುದಾಗಿ’ ತಿಳಿಸಿದರು.