<p>ಕಾಗವಾಡ: ಉತ್ತರ ಕರ್ನಾಟಕದ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದಾದ ತಾಲ್ಲೂಕಿನ ಮಂಗಸೂಳಿ ಗ್ರಾಮದ ಮಲ್ಲಯ್ಯ (ಖಂಡೋಬಾ) ಜಾತ್ರೆಯು ಕರ್ನಾಟಕ ಮತ್ತು ಮಹಾರಾಷ್ಟ್ರದ ಲಕ್ಷಾಂತರ ಭಕ್ತರನ್ನು ಆಕರ್ಷಿಸುವ ಪ್ರಮುಖ ಧಾರ್ಮಿಕ ಹಬ್ಬವಾಗಿದ್ದು ಮಾರ್ಚ್ 26ರಿಂದ ಐದು ದಿನಗಳವರೆಗೆ ಜಾತ್ರೆ ಹಾಗೂ ದನಗಳ ಬೃಹತ್ ಜಾತ್ರೆ ನಡೆಯಲಿದೆ.</p>.<p>ಕಾಗವಾಡ ತಾಲ್ಲೂಕಿನ ಮಂಗಸೂಳಿ ಗ್ರಾಮದ ಮಲ್ಲಯ್ಯ ಶಿವನ ಅವತಾರವೆಂದು ನಂಬಲಾದ ಮಲ್ಲಯ್ಯನಿಗೆ ಇಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಭಂಡಾರ ಎರಚಿ, 'ಏಳುಕೋಟಿ' ಘೋಷಣೆಯೊಂದಿಗೆ ಜಾತ್ರೆ ನಡೆಯುತ್ತದೆ.</p>.<p>ಶನಿವಾರ ದೇವರಿಗೆ ನೈವೇದ್ಯ ಕಾರ್ಯಕ್ರಮ ನಡೆಯಲಿದ್ದು ಅದೇ ದಿನ ಸಂಜೆ ಸರಪಳಿ ಹರಿಯುವ ಕಾರ್ಯಕ್ರಮ ನಡೆಯಲಿದೆ. ಜಾತ್ರೆಯಲ್ಲಿ ಬಂದಿರುವ ಜಾತಿವಂತ ದನಗಳಿಗೆ ಸೋಮವಾರ ಪ್ರಶಸ್ತಿ ಪತ್ರ ಹಾಗೂ ಬಹುಮಾನ ವಿತರಣಾ ಕಾರ್ಯಾಕ್ರಮ ನಡೆಯಲಿದೆ ಎಂದು ಜಾತ್ರಾ ಸಮಿತಿ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260326-21-754123010</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾಗವಾಡ: ಉತ್ತರ ಕರ್ನಾಟಕದ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದಾದ ತಾಲ್ಲೂಕಿನ ಮಂಗಸೂಳಿ ಗ್ರಾಮದ ಮಲ್ಲಯ್ಯ (ಖಂಡೋಬಾ) ಜಾತ್ರೆಯು ಕರ್ನಾಟಕ ಮತ್ತು ಮಹಾರಾಷ್ಟ್ರದ ಲಕ್ಷಾಂತರ ಭಕ್ತರನ್ನು ಆಕರ್ಷಿಸುವ ಪ್ರಮುಖ ಧಾರ್ಮಿಕ ಹಬ್ಬವಾಗಿದ್ದು ಮಾರ್ಚ್ 26ರಿಂದ ಐದು ದಿನಗಳವರೆಗೆ ಜಾತ್ರೆ ಹಾಗೂ ದನಗಳ ಬೃಹತ್ ಜಾತ್ರೆ ನಡೆಯಲಿದೆ.</p>.<p>ಕಾಗವಾಡ ತಾಲ್ಲೂಕಿನ ಮಂಗಸೂಳಿ ಗ್ರಾಮದ ಮಲ್ಲಯ್ಯ ಶಿವನ ಅವತಾರವೆಂದು ನಂಬಲಾದ ಮಲ್ಲಯ್ಯನಿಗೆ ಇಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಭಂಡಾರ ಎರಚಿ, 'ಏಳುಕೋಟಿ' ಘೋಷಣೆಯೊಂದಿಗೆ ಜಾತ್ರೆ ನಡೆಯುತ್ತದೆ.</p>.<p>ಶನಿವಾರ ದೇವರಿಗೆ ನೈವೇದ್ಯ ಕಾರ್ಯಕ್ರಮ ನಡೆಯಲಿದ್ದು ಅದೇ ದಿನ ಸಂಜೆ ಸರಪಳಿ ಹರಿಯುವ ಕಾರ್ಯಕ್ರಮ ನಡೆಯಲಿದೆ. ಜಾತ್ರೆಯಲ್ಲಿ ಬಂದಿರುವ ಜಾತಿವಂತ ದನಗಳಿಗೆ ಸೋಮವಾರ ಪ್ರಶಸ್ತಿ ಪತ್ರ ಹಾಗೂ ಬಹುಮಾನ ವಿತರಣಾ ಕಾರ್ಯಾಕ್ರಮ ನಡೆಯಲಿದೆ ಎಂದು ಜಾತ್ರಾ ಸಮಿತಿ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260326-21-754123010</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>