<p><strong>ಕಾಗವಾಡ:</strong> ‘ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರ ಸಾಕಷ್ಟು ಅನುದಾನ ನೀಡುತ್ತಿದೆ. ಮತಕ್ಷೇತ್ರದಲ್ಲಿ ಈಗಾಗಲೇ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ’ ಎಂದು ಶಾಸಕ ರಾಜು ಕಾಗೆ ಹೇಳಿದರು.</p>.<p>ಮತ ಕ್ಷೇತ್ರದ ಜಂಬಗಿ ಗ್ರಾಮದಲ್ಲಿ ₹25 ಲಕ್ಷ ವೆಚ್ಚದ ಜಂಬಗಿ- ಶಿರೂರ ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸೋಮವಾರ ಭೂಮಿಪೂಜೆ ಸಲ್ಲಿಸಿ ಅವರು ಮಾತನಾಡಿ, ‘ಉತ್ತಮ ರಸ್ತೆ, ಕುಡಿಯುವ ನೀರು ಇನ್ನಿತರ ಮೂಲ ಸೌಲಭ್ಯಗಳನ್ನು ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು’ ಎಂದರು.</p>.<p>‘ಗ್ರಾಮೀಣ ಭಾಗದ ರಸ್ತೆಗಳು ಅಭಿವೃದ್ಧಿ ಆದರೆ ಮಾತ್ರ ರೈತರು ಬೆಳೆದ ಬೆಳೆ ಸಕಾಲಕ್ಕೆ ಮಾರುಕಟ್ಟೆ ತಲುಪಿ ರೈತರು ಅಭಿವೃದ್ಧಿ ಹೊಂದಲು ಸಾಧ್ಯ. ಆದ್ದರಿಂದ ಬರುವ ದಿನಗಳಲ್ಲಿ ಅಭಿವೃದ್ಧಿ ಕಾಣದ ರಸ್ತೆ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>ವಿನಾಯಕ ಬಾಗಡೆ, ಪಂಚಾಯತ್ ರಾಜ್ ವಿಭಾಗದ ಎಇಇ ಈರಣ್ಣ ವಾಲಿ, ರವೀಂದ್ರ ವಾಗಮೋರೆ, ರಾಜೇಂದ್ರ ಪಾಟೀಲ, ಮೋಹನ ರಣಧೀರೆ, ಬಸವರಾಜ ಮಾಳಿ, ಯಶವಂತ ಪಾಟೀಲ, ಬಂಡು ಸೂರ್ಯವಂಶಿ, ಅನೀಕೇತ ಪಾಟೀಲ, ಶಿವಾನಂದ ಭೂವಿವಡ್ಡರ, ವೈ.ಆರ್. ಪಾಟೀಲ, ಪ್ರಕಾಶ ಜಾಧವ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಗವಾಡ:</strong> ‘ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರ ಸಾಕಷ್ಟು ಅನುದಾನ ನೀಡುತ್ತಿದೆ. ಮತಕ್ಷೇತ್ರದಲ್ಲಿ ಈಗಾಗಲೇ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ’ ಎಂದು ಶಾಸಕ ರಾಜು ಕಾಗೆ ಹೇಳಿದರು.</p>.<p>ಮತ ಕ್ಷೇತ್ರದ ಜಂಬಗಿ ಗ್ರಾಮದಲ್ಲಿ ₹25 ಲಕ್ಷ ವೆಚ್ಚದ ಜಂಬಗಿ- ಶಿರೂರ ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸೋಮವಾರ ಭೂಮಿಪೂಜೆ ಸಲ್ಲಿಸಿ ಅವರು ಮಾತನಾಡಿ, ‘ಉತ್ತಮ ರಸ್ತೆ, ಕುಡಿಯುವ ನೀರು ಇನ್ನಿತರ ಮೂಲ ಸೌಲಭ್ಯಗಳನ್ನು ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು’ ಎಂದರು.</p>.<p>‘ಗ್ರಾಮೀಣ ಭಾಗದ ರಸ್ತೆಗಳು ಅಭಿವೃದ್ಧಿ ಆದರೆ ಮಾತ್ರ ರೈತರು ಬೆಳೆದ ಬೆಳೆ ಸಕಾಲಕ್ಕೆ ಮಾರುಕಟ್ಟೆ ತಲುಪಿ ರೈತರು ಅಭಿವೃದ್ಧಿ ಹೊಂದಲು ಸಾಧ್ಯ. ಆದ್ದರಿಂದ ಬರುವ ದಿನಗಳಲ್ಲಿ ಅಭಿವೃದ್ಧಿ ಕಾಣದ ರಸ್ತೆ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>ವಿನಾಯಕ ಬಾಗಡೆ, ಪಂಚಾಯತ್ ರಾಜ್ ವಿಭಾಗದ ಎಇಇ ಈರಣ್ಣ ವಾಲಿ, ರವೀಂದ್ರ ವಾಗಮೋರೆ, ರಾಜೇಂದ್ರ ಪಾಟೀಲ, ಮೋಹನ ರಣಧೀರೆ, ಬಸವರಾಜ ಮಾಳಿ, ಯಶವಂತ ಪಾಟೀಲ, ಬಂಡು ಸೂರ್ಯವಂಶಿ, ಅನೀಕೇತ ಪಾಟೀಲ, ಶಿವಾನಂದ ಭೂವಿವಡ್ಡರ, ವೈ.ಆರ್. ಪಾಟೀಲ, ಪ್ರಕಾಶ ಜಾಧವ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>