ಉಗಾರಖುರ್ದ್ ಪಟ್ಟಣದಲ್ಲಿ ಮಾತನಾಡಿದ ಅವರು, ‘ನನಗೆ ಜನರಿಂದ ಅಪಾರ ಬೆಂಬಲ ವ್ಯಕ್ತವಾಗುತ್ತಿದೆ. ಹೀಗಾಗಿ, ಅವರಲ್ಲಿ ಮತ ಭಿಕ್ಷೆ ಬೇಡುವುದಿಲ್ಲ. ನಾಲ್ಕು ಬಾರಿ ಶಾಸಕನಾಗಿ ಜನಪರ ಕೆಲಸ ಮಾಡಿದ್ದೇನೆ. ಜನರು ಬದಲಾವಣೆ ಬಯಸಿ ಹೋದ ಬಾರಿ ಬೇರೆಯವರನ್ನು ಗೆಲ್ಲಿಸಿದ್ದರು. ಆದರೆ ಅವರೊಂದಿಗೆ ಇದ್ದ ಶೇ 90ರಷ್ಟು ಮಂದಿ ಈ ಬಾರಿ ನನ್ನನ್ನು ಬೆಂಬಲಿಸುತ್ತಿದ್ದಾರೆ’ ಎಂದರು.