ಆನ್ಲೈನ್ನಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಪ್ರಶಸ್ತಿಯನ್ನು ಘೋಷಿಸಿದರು. ಸ್ವಚ್ಛತಾ ಕ್ರಿಯಾ ಯೋಜನೆ ಮತ್ತು ನೈರ್ಮಲ್ಯ, ತ್ಯಾಜ್ಯ, ನೀರು, ಇಂಧನ ಮತ್ತು ಹಸಿರು ನಿರ್ವಹಣೆ ಕ್ಷೇತ್ರಗಳಲ್ಲಿ ಉತ್ತಮ ಅಭ್ಯಾಸಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದಕ್ಕಾಗಿ ಈ ಪ್ರಶಸ್ತಿಯನ್ನು ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯ, ಎಂ.ಜಿ.ಎನ್.ಸಿ.ಆರ್.ಇ, ಉನ್ನತ ಶಿಕ್ಷಣ ಇಲಾಖೆ ನಿರ್ದೇಶನದಂತೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.