<p><strong>ಕಕಮರಿ</strong>: ‘ರೈತರಿಗೆ ಸರ್ಕಾರದಿಂದ ರಿಯಾಯಿತಿ ದರದಲ್ಲಿ ಬಿತ್ತನೆಬೀಜಗಳನ್ನು ವಿತರಿಸುತ್ತಿದ್ದು, ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಕೃಷಿ ಅಧಿಕಾರಿ ಯಂಕಪ್ಪ ಅಸ್ಕಿ ಹೇಳಿದರು.</p>.<p>ಗ್ರಾಮದ ಅಮ್ಮಾಜೇಶ್ವರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸೋಮವಾರ ಮುಂಗಾರು ಹಂಗಾಮಿಗೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಈ ಭಾಗದಲ್ಲಿ ಹೆಚ್ಚಾಗಿ ತೊಗರಿ ಹಾಗೂ ಉದ್ದು ಬೆಳೆಯುತ್ತಾರೆ. ಹೀಗಾಗಿ, ಅಗತ್ಯ ಪ್ರಮಾಣದಲ್ಲಿ ಆ ಬೀಜಗಳನ್ನು ದಾಸ್ತಾನು ಮಾಡಲಾಗಿದೆ. ರೈತರಿಗೆ ಸಕಾಲದಲ್ಲಿ ದೊರೆಯಲು ಕ್ರಮ ವಹಿಸಲಾಗಿದೆ. ಕೃಷಿಕರು ಆತಂಕ ಪಡುವ ಅಗತ್ಯವಿಲ್ಲ. ಗುಣಮಟ್ಟದ ಬೀಜ ವಿತರಿಸಲಾಗುತ್ತಿದೆ’ ಎಂದರು.</p>.<p>ಮುಖಂಡ ಮುತ್ತಣ್ಣ ಸಿಂದೂರ, ‘ಗ್ರಾಮದ ಸಹಕಾರಿ ಸಂಘವನ್ನು ಬೀಜ ವಿತರಣೆ ಕೇಂದ್ರ ಮಾಡಿರುವುದರಿಂದ ಕಕಮರಿ, ಕೊಟ್ಟಲಗಿ, ರಾಮತೀರ್ಥ ಗ್ರಾಮಗಳ ರೈತರಿಗೆ ಅನುಕೂಲವಾಗಿದೆ’ ಎಂದು ತಿಳಿಸಿದರು.</p>.<p>ಸಹಾಯಕ ಕೃಷಿ ಅಧಿಕಾರಿ ಎಸ್.ಎಂ. ಕಾಮಗೊಂಡ, ಅಮ್ಮಾಜೇಶ್ವರಿ ಪಿಕೆಪಿಎಸ್ ಆಡಳಿತ ಮಂಡಳಿ ಸದಸ್ಯರಾದ ಕಲ್ಲಪ್ಪ, ರಾಜೇಂದ್ರ ವಾಲಿ, ಶ್ರೀಶೈಲ ಜನಗೌಡ, ಕಲ್ಲಪ್ಪ ಅಡಹಳ್ಳಿ, ಸಿಇಒ ಎಂ.ಎಸ್. ಜನಗೌಡ, ಸುರೇಶ ದಾಶ್ಯಾಳ, ಮೇಲಪ್ಪ ಜನಗೌಡ, ಶಿವಾನಂದ ಬಸರಗಿ, ಸಂತೋಷ ಕಾಂಬಳೆ, ದರೆಪ್ಪ ಮಲಾಬದಿ, ಮಹಾಂತೇಶ ಹೊನವಾಡ, ಅಪ್ಪಾಸಾಬ ಸಿಂದೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಕಮರಿ</strong>: ‘ರೈತರಿಗೆ ಸರ್ಕಾರದಿಂದ ರಿಯಾಯಿತಿ ದರದಲ್ಲಿ ಬಿತ್ತನೆಬೀಜಗಳನ್ನು ವಿತರಿಸುತ್ತಿದ್ದು, ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಕೃಷಿ ಅಧಿಕಾರಿ ಯಂಕಪ್ಪ ಅಸ್ಕಿ ಹೇಳಿದರು.</p>.<p>ಗ್ರಾಮದ ಅಮ್ಮಾಜೇಶ್ವರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸೋಮವಾರ ಮುಂಗಾರು ಹಂಗಾಮಿಗೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಈ ಭಾಗದಲ್ಲಿ ಹೆಚ್ಚಾಗಿ ತೊಗರಿ ಹಾಗೂ ಉದ್ದು ಬೆಳೆಯುತ್ತಾರೆ. ಹೀಗಾಗಿ, ಅಗತ್ಯ ಪ್ರಮಾಣದಲ್ಲಿ ಆ ಬೀಜಗಳನ್ನು ದಾಸ್ತಾನು ಮಾಡಲಾಗಿದೆ. ರೈತರಿಗೆ ಸಕಾಲದಲ್ಲಿ ದೊರೆಯಲು ಕ್ರಮ ವಹಿಸಲಾಗಿದೆ. ಕೃಷಿಕರು ಆತಂಕ ಪಡುವ ಅಗತ್ಯವಿಲ್ಲ. ಗುಣಮಟ್ಟದ ಬೀಜ ವಿತರಿಸಲಾಗುತ್ತಿದೆ’ ಎಂದರು.</p>.<p>ಮುಖಂಡ ಮುತ್ತಣ್ಣ ಸಿಂದೂರ, ‘ಗ್ರಾಮದ ಸಹಕಾರಿ ಸಂಘವನ್ನು ಬೀಜ ವಿತರಣೆ ಕೇಂದ್ರ ಮಾಡಿರುವುದರಿಂದ ಕಕಮರಿ, ಕೊಟ್ಟಲಗಿ, ರಾಮತೀರ್ಥ ಗ್ರಾಮಗಳ ರೈತರಿಗೆ ಅನುಕೂಲವಾಗಿದೆ’ ಎಂದು ತಿಳಿಸಿದರು.</p>.<p>ಸಹಾಯಕ ಕೃಷಿ ಅಧಿಕಾರಿ ಎಸ್.ಎಂ. ಕಾಮಗೊಂಡ, ಅಮ್ಮಾಜೇಶ್ವರಿ ಪಿಕೆಪಿಎಸ್ ಆಡಳಿತ ಮಂಡಳಿ ಸದಸ್ಯರಾದ ಕಲ್ಲಪ್ಪ, ರಾಜೇಂದ್ರ ವಾಲಿ, ಶ್ರೀಶೈಲ ಜನಗೌಡ, ಕಲ್ಲಪ್ಪ ಅಡಹಳ್ಳಿ, ಸಿಇಒ ಎಂ.ಎಸ್. ಜನಗೌಡ, ಸುರೇಶ ದಾಶ್ಯಾಳ, ಮೇಲಪ್ಪ ಜನಗೌಡ, ಶಿವಾನಂದ ಬಸರಗಿ, ಸಂತೋಷ ಕಾಂಬಳೆ, ದರೆಪ್ಪ ಮಲಾಬದಿ, ಮಹಾಂತೇಶ ಹೊನವಾಡ, ಅಪ್ಪಾಸಾಬ ಸಿಂದೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>