<p><strong>ಬೆಳಗಾವಿ:</strong> ‘ವಿದ್ಯಾರ್ಥಿಗಳು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪಠ್ಯದ ಜೊತೆಗೆ ಸಾಂಸ್ಕೃತಿಕ ಸ್ಪರ್ಧೆ ಮೊದಲಾದ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಈ ಮೂಲಕ ಸ್ಪರ್ಧಾತ್ಮಕ ಮನೋಭಾವ ರೂಢಿಸಿಕೊಳ್ಳಬೇಕು’ ಎಂದುಜ್ಞಾನ ಪ್ರಭೋದನ ಶಾಲೆಯ ಪ್ರಾಚಾರ್ಯೆ ಮಂಜರಿ ರಾನಡೆ ಸಲಹೆ ನೀಡಿದರು.</p>.<p>ಇಲ್ಲಿನ ಸುರೇಶ ಅಂಗಡಿ ಶಿಕ್ಷಣ ಸಂಸ್ಥೆಯ ಅಂಗಡಿ ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ಜಿಲ್ಲೆಯ ಗ್ರಾಮೀಣ ಮತ್ತು ನಗರದ ಎಲ್ಲ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ‘ಕಲಾ ಸಂಗಮ’ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಿ ಅವರು ಮಾತನಾಡಿದರು.</p>.<p>‘ಸೋಲು–ಗೆಲುವನ್ನು ಸಮನಾಗಿ ಸ್ವೀಕರಿಸಿ ಮುಂದಿನ ಸ್ಪರ್ಧೆಗೆ ತಯಾರಾಗಬೇಕು. ಈ ನಿಟ್ಟಿನಲ್ಲಿ ಪೋಷಕರು ಮಕ್ಕಳಿಗೆ ಸಲಹೆ, ಸಹಕಾರ ಹಾಗೂ ಪ್ರೋತ್ಸಾಹ ನೀಡಬೇಕು’ ಎಂದರು.</p>.<p>ಸಂಸ್ಥೆಯ ನಿರ್ದೇಶಿಕಿ ಶ್ರದ್ಧಾ ಶೆಟ್ಟರ ಅಧ್ಯಕ್ಷತೆ ವಹಿಸಿದ್ದರು. ಸ್ಪರ್ಧೆಗಳನ್ನು ಗೂಗಲ್ ಮೀಟ್ನಲ್ಲಿ ನಡೆಸಲಾಯಿತು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಮಾಣಪತ್ರ ವಿತರಿಸಲಾಯಿತು.</p>.<p>ಸಂಸ್ಥೆಯ ಆಡಳಿತಾಧಿಕಾರಿ ರಾಜು ಜೋಶಿ, ಅಕಾಡೆಮಿಕ್ಸ್ ನಿರ್ದೇಶಕ ಅಮರ ಬ್ಯಾಕೋಡಿ, ‘ಕಲಾಸಂಗಮ’ ಸಂಯೋಜಕ ಪ್ರೊ.ನಾಗೇಶ್ವರ ಡೆಮಿನಕೊಪ್ಪ ಇದ್ದರು.</p>.<p>ಪ್ರಾಚಾರ್ಯೆ ಸಂಗೀತಾ ದೇಸಾಯಿ ಸ್ವಾಗತಿಸಿದರು. ಪ್ರೊ.ಕಾರ್ತಿಕ ಕುಲಕರ್ಣಿ ಪರಿಚಯಿಸಿದರು. ಪ್ರೊ.ವಿನಿತಾ ಹೊಲ್ಲಿಕೇರಿ ನಿರೂಪಿಸಿದರು. ಪ್ರೊ.ಭರತ ನೀಲಜಕರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ವಿದ್ಯಾರ್ಥಿಗಳು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪಠ್ಯದ ಜೊತೆಗೆ ಸಾಂಸ್ಕೃತಿಕ ಸ್ಪರ್ಧೆ ಮೊದಲಾದ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಈ ಮೂಲಕ ಸ್ಪರ್ಧಾತ್ಮಕ ಮನೋಭಾವ ರೂಢಿಸಿಕೊಳ್ಳಬೇಕು’ ಎಂದುಜ್ಞಾನ ಪ್ರಭೋದನ ಶಾಲೆಯ ಪ್ರಾಚಾರ್ಯೆ ಮಂಜರಿ ರಾನಡೆ ಸಲಹೆ ನೀಡಿದರು.</p>.<p>ಇಲ್ಲಿನ ಸುರೇಶ ಅಂಗಡಿ ಶಿಕ್ಷಣ ಸಂಸ್ಥೆಯ ಅಂಗಡಿ ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ಜಿಲ್ಲೆಯ ಗ್ರಾಮೀಣ ಮತ್ತು ನಗರದ ಎಲ್ಲ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ‘ಕಲಾ ಸಂಗಮ’ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಿ ಅವರು ಮಾತನಾಡಿದರು.</p>.<p>‘ಸೋಲು–ಗೆಲುವನ್ನು ಸಮನಾಗಿ ಸ್ವೀಕರಿಸಿ ಮುಂದಿನ ಸ್ಪರ್ಧೆಗೆ ತಯಾರಾಗಬೇಕು. ಈ ನಿಟ್ಟಿನಲ್ಲಿ ಪೋಷಕರು ಮಕ್ಕಳಿಗೆ ಸಲಹೆ, ಸಹಕಾರ ಹಾಗೂ ಪ್ರೋತ್ಸಾಹ ನೀಡಬೇಕು’ ಎಂದರು.</p>.<p>ಸಂಸ್ಥೆಯ ನಿರ್ದೇಶಿಕಿ ಶ್ರದ್ಧಾ ಶೆಟ್ಟರ ಅಧ್ಯಕ್ಷತೆ ವಹಿಸಿದ್ದರು. ಸ್ಪರ್ಧೆಗಳನ್ನು ಗೂಗಲ್ ಮೀಟ್ನಲ್ಲಿ ನಡೆಸಲಾಯಿತು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಮಾಣಪತ್ರ ವಿತರಿಸಲಾಯಿತು.</p>.<p>ಸಂಸ್ಥೆಯ ಆಡಳಿತಾಧಿಕಾರಿ ರಾಜು ಜೋಶಿ, ಅಕಾಡೆಮಿಕ್ಸ್ ನಿರ್ದೇಶಕ ಅಮರ ಬ್ಯಾಕೋಡಿ, ‘ಕಲಾಸಂಗಮ’ ಸಂಯೋಜಕ ಪ್ರೊ.ನಾಗೇಶ್ವರ ಡೆಮಿನಕೊಪ್ಪ ಇದ್ದರು.</p>.<p>ಪ್ರಾಚಾರ್ಯೆ ಸಂಗೀತಾ ದೇಸಾಯಿ ಸ್ವಾಗತಿಸಿದರು. ಪ್ರೊ.ಕಾರ್ತಿಕ ಕುಲಕರ್ಣಿ ಪರಿಚಯಿಸಿದರು. ಪ್ರೊ.ವಿನಿತಾ ಹೊಲ್ಲಿಕೇರಿ ನಿರೂಪಿಸಿದರು. ಪ್ರೊ.ಭರತ ನೀಲಜಕರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>