ತಾಲ್ಲೂಕಿನಲ್ಲಿ ಕಲ್ಲೋಳ–ಯಡೂರ ಗ್ರಾಮಗಳ ಮಧ್ಯೆ ಇರುವ ಕೆಳಮಟ್ಟದ ಸೇತುವೆ ಸೋಮವಾರ ಮುಳುಗಡೆಯಾಗಿದೆ. ಸೇತುವೆ ಮೇಲೆ ಸುಮಾರು ಎರಡು ಅಡಿಯಷ್ಟು ನೀರು ಹರಿಯುತ್ತಿದೆ. ಸುಮಾರು 20 ದಿನಗಳ ಕಾಲ ಮುಳುಗಡೆ ಸ್ಥಿತಿಯಲ್ಲಿದ್ದ ಈ ಸೇತುವೆ, ಜುಲೈ 29ರಂದು ಸಂಚಾರಕ್ಕೆ ಮುಕ್ತವಾಗಿತ್ತು. ಇದೀಗ ಮತ್ತೆ ಜಲಾವೃತಗೊಂಡಿರುವುದರಿಂದ ಸಾರ್ವಜನಿಕರು ಸುತ್ತು ಬಳಸಿ ಪ್ರಯಾಣಿಸುವಂತಾಗಿದೆ.