<p>ಬೆಳಗಾವಿ: ಗ್ರಾಮೀಣ ಕ್ಷೇತ್ರದ ಮಾರಿಹಾಳ ಗ್ರಾಮದಲ್ಲಿ ಗುಡದಮ್ಮ ದೇವಸ್ಥಾನದ ನೂತನ ಕಲ್ಯಾಣ ಮಂಟಪದ ಕಟ್ಟಡದ ಕಾಮಗಾರಿಗೆ ಶನಿವಾರ ಚಾಲನೆ ನೀಡಲಾಯಿತು.</p>.<p>ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅನುಪಸ್ಥಿತಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಹರ್ಷ ಶುಗರ್ಸ್ ವ್ಯವಸ್ಥಾಪಕ ನಿರ್ದೇಶಕ ಚನ್ನರಾಜ ಹಟ್ಟಿಹೊಳಿ ಹಾಗೂ ದೇವಸ್ಥಾನದ ಸಮಿತಿಯವರು ಪೂಜೆ ನೆರವೇರಿಸಿದರು.</p>.<p>‘ಗುಡದಮ್ಮ ದೇವಸ್ಥಾನದ ಕಲ್ಯಾಣಮಂಟಪ ನಿರ್ಮಾಣವು ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿತ್ತು. ಅದಕ್ಕೆ ಸ್ಪಂದಿಸಿ ಶಾಸಕರು ವೈಯಕ್ತಿಕ ಖರ್ಚಿನಲ್ಲಿ ನಿರ್ಮಾಣ ಮಾಡಿಕೊಡಲು ಮುಂದಾಗಿದ್ದಾರೆ’ ಎಂದು ಚನ್ನರಾಜ ತಿಳಿಸಿದರು.</p>.<p>ಗ್ರಾಮ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು, ಮುಖಂಡರಾದ ಶಂಕರಗೌಡ ಪಾಟೀಲ, ಬಸವರಾಜ ಮ್ಯಾಗೋಟಿ, ಮೃಣಾಲ ಹೆಬ್ಬಾಳಕರ, ತೌಸಿಫ್ ಫಣಿಬಂಧ, ಸಮೀರ, ಚಾಟೆ, ಪ್ರಾಥಮಿಕ ಕೃಷಿ ಪತ್ತಿನ ಸೊಸೈಟಿಯ ಅಧ್ಯಕ್ಷರು, ತಮ್ಮಣ್ಣ, ದೇವಸ್ಥಾನ ಸಮಿತಿಯವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ಗ್ರಾಮೀಣ ಕ್ಷೇತ್ರದ ಮಾರಿಹಾಳ ಗ್ರಾಮದಲ್ಲಿ ಗುಡದಮ್ಮ ದೇವಸ್ಥಾನದ ನೂತನ ಕಲ್ಯಾಣ ಮಂಟಪದ ಕಟ್ಟಡದ ಕಾಮಗಾರಿಗೆ ಶನಿವಾರ ಚಾಲನೆ ನೀಡಲಾಯಿತು.</p>.<p>ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅನುಪಸ್ಥಿತಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಹರ್ಷ ಶುಗರ್ಸ್ ವ್ಯವಸ್ಥಾಪಕ ನಿರ್ದೇಶಕ ಚನ್ನರಾಜ ಹಟ್ಟಿಹೊಳಿ ಹಾಗೂ ದೇವಸ್ಥಾನದ ಸಮಿತಿಯವರು ಪೂಜೆ ನೆರವೇರಿಸಿದರು.</p>.<p>‘ಗುಡದಮ್ಮ ದೇವಸ್ಥಾನದ ಕಲ್ಯಾಣಮಂಟಪ ನಿರ್ಮಾಣವು ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿತ್ತು. ಅದಕ್ಕೆ ಸ್ಪಂದಿಸಿ ಶಾಸಕರು ವೈಯಕ್ತಿಕ ಖರ್ಚಿನಲ್ಲಿ ನಿರ್ಮಾಣ ಮಾಡಿಕೊಡಲು ಮುಂದಾಗಿದ್ದಾರೆ’ ಎಂದು ಚನ್ನರಾಜ ತಿಳಿಸಿದರು.</p>.<p>ಗ್ರಾಮ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು, ಮುಖಂಡರಾದ ಶಂಕರಗೌಡ ಪಾಟೀಲ, ಬಸವರಾಜ ಮ್ಯಾಗೋಟಿ, ಮೃಣಾಲ ಹೆಬ್ಬಾಳಕರ, ತೌಸಿಫ್ ಫಣಿಬಂಧ, ಸಮೀರ, ಚಾಟೆ, ಪ್ರಾಥಮಿಕ ಕೃಷಿ ಪತ್ತಿನ ಸೊಸೈಟಿಯ ಅಧ್ಯಕ್ಷರು, ತಮ್ಮಣ್ಣ, ದೇವಸ್ಥಾನ ಸಮಿತಿಯವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>