<p><strong>ಬೆಳಗಾವಿ:</strong> ‘ಆಧ್ಯಾತ್ಮಿಕ ನೆಲೆಗಟ್ಟಿನಲ್ಲೆ ಸಾಮಾಜಿಕ ಸಾಮರಸ್ಯವನ್ನು ಎತ್ತಿ ಹಿಡಿದ ಕೀರ್ತಿ ಸಂತ ಶ್ರೇಷ್ಠ ಕನಕದಾಸರಿಗೆ ಸಲ್ಲುತ್ತದೆ. ಅವರ ಬದುಕು ಹಾಗೂ ಸಂದೇಶ ನಮ್ಮೆಲ್ಲರಿಗೂ ಮಾದರಿಯಾಗಿದೆ. ಅವರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ವಿಟಿಯು ಕುಲಪತಿ ಪ್ರೊ.ಕರಿಸಿದ್ದಪ್ಪ ಹೇಳಿದರು.</p>.<p>ಇಲ್ಲಿನ ವಿಟಿಯುನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕನಕದಾಸ ಜಯಂತಿಯಲ್ಲಿ ಫೋಟೊಗೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.</p>.<p>‘ಕನಕದಾಸರ ಬದುಕು ತ್ಯಾಗದಿಂದ ಕೂಡಿದೆ. ಒಬ್ಬ ದಳಪತಿ ಎಲ್ಲವನ್ನೂ ತ್ಯಾಗ ಮಾಡಿ ಭಕ್ತಿಪರಂಪರೆಯಲ್ಲಿ ಉಡುಪಿ ಕೃಷ್ಣನ ಆತ್ಮಭಕ್ತನಾಗಿ ಕೀರ್ತನೆಗಳನ್ನು ರಚಿಸಿ ಕನ್ನಡ ಸಾಹಿತ್ಯ ಹಾಗೂ ಸಂಗೀತ ಕ್ಷೇತ್ರಕ್ಕೆ ಶ್ರೇಷ್ಠ ಕೊಡುಗೆ ಕೊಟ್ಟಿದ್ದಾರೆ. ಈ ಕೀರ್ತನೆಗಳು ಕೇವಲ ದಾಸ ಮತ್ತು ಆರಾಧ್ಯ ದೇವರ ನಡುವಿನ ಭಕ್ತಿಯ ಅಂಶಗಳನ್ನ ಹೇಳದೆ ಸಾಮಾಜಿಕ ಬದುಕು ಹೇಗಿರಬೇಕು ಎನ್ನುವುದನ್ನೂ ಸಾರಿದೆ’ ಎಂದರು.</p>.<p>‘ಮುಂದಿನ ಪೀಳಿಗೆಗೆ ಇಂತಹ ಮಹನೀಯರ ವಿಚಾರಗಳನ್ನು ಒಯ್ಯುವ ಜವಾಬ್ದಾರಿ ನಮ್ಮ ಮೇಲಿದೆ’ ಎಂದು ತಿಳಿಸಿದರು.</p>.<p>ಕುಲಸಚಿವರಾದ ಪ್ರೊ.ಎ.ಎಸ್. ದೇಶಪಾಂಡೆ, ಪ್ರೊ.ಸತೀಶ ಅಣ್ಣಿಗೇರಿ, ಹಣಕಾಸು ಅಧಿಕಾರಿ ಎಂ.ಎ. ಸಪ್ನಾ, ಸ್ಥಾನಿಕ ಎಂಜಿನಿಯರ್ ಹೇಮಂತ್ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ಆಧ್ಯಾತ್ಮಿಕ ನೆಲೆಗಟ್ಟಿನಲ್ಲೆ ಸಾಮಾಜಿಕ ಸಾಮರಸ್ಯವನ್ನು ಎತ್ತಿ ಹಿಡಿದ ಕೀರ್ತಿ ಸಂತ ಶ್ರೇಷ್ಠ ಕನಕದಾಸರಿಗೆ ಸಲ್ಲುತ್ತದೆ. ಅವರ ಬದುಕು ಹಾಗೂ ಸಂದೇಶ ನಮ್ಮೆಲ್ಲರಿಗೂ ಮಾದರಿಯಾಗಿದೆ. ಅವರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ವಿಟಿಯು ಕುಲಪತಿ ಪ್ರೊ.ಕರಿಸಿದ್ದಪ್ಪ ಹೇಳಿದರು.</p>.<p>ಇಲ್ಲಿನ ವಿಟಿಯುನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕನಕದಾಸ ಜಯಂತಿಯಲ್ಲಿ ಫೋಟೊಗೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.</p>.<p>‘ಕನಕದಾಸರ ಬದುಕು ತ್ಯಾಗದಿಂದ ಕೂಡಿದೆ. ಒಬ್ಬ ದಳಪತಿ ಎಲ್ಲವನ್ನೂ ತ್ಯಾಗ ಮಾಡಿ ಭಕ್ತಿಪರಂಪರೆಯಲ್ಲಿ ಉಡುಪಿ ಕೃಷ್ಣನ ಆತ್ಮಭಕ್ತನಾಗಿ ಕೀರ್ತನೆಗಳನ್ನು ರಚಿಸಿ ಕನ್ನಡ ಸಾಹಿತ್ಯ ಹಾಗೂ ಸಂಗೀತ ಕ್ಷೇತ್ರಕ್ಕೆ ಶ್ರೇಷ್ಠ ಕೊಡುಗೆ ಕೊಟ್ಟಿದ್ದಾರೆ. ಈ ಕೀರ್ತನೆಗಳು ಕೇವಲ ದಾಸ ಮತ್ತು ಆರಾಧ್ಯ ದೇವರ ನಡುವಿನ ಭಕ್ತಿಯ ಅಂಶಗಳನ್ನ ಹೇಳದೆ ಸಾಮಾಜಿಕ ಬದುಕು ಹೇಗಿರಬೇಕು ಎನ್ನುವುದನ್ನೂ ಸಾರಿದೆ’ ಎಂದರು.</p>.<p>‘ಮುಂದಿನ ಪೀಳಿಗೆಗೆ ಇಂತಹ ಮಹನೀಯರ ವಿಚಾರಗಳನ್ನು ಒಯ್ಯುವ ಜವಾಬ್ದಾರಿ ನಮ್ಮ ಮೇಲಿದೆ’ ಎಂದು ತಿಳಿಸಿದರು.</p>.<p>ಕುಲಸಚಿವರಾದ ಪ್ರೊ.ಎ.ಎಸ್. ದೇಶಪಾಂಡೆ, ಪ್ರೊ.ಸತೀಶ ಅಣ್ಣಿಗೇರಿ, ಹಣಕಾಸು ಅಧಿಕಾರಿ ಎಂ.ಎ. ಸಪ್ನಾ, ಸ್ಥಾನಿಕ ಎಂಜಿನಿಯರ್ ಹೇಮಂತ್ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>