ಬೆಳಗಾವಿ: ‘ಕೋವಿಡ್-19 ಕಾರಣದಿಂದಾಗಿ, ಡಿ.3ರಂದು ಕನಕದಾಸ ಜಯಂತಿಯನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು.
ಇಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಅಂದು ಬೆಳಿಗ್ಗೆ 9.30ಕ್ಕೆ ಬುಡಾ ಕಚೇರಿ ಬಳಿಯ ಕನಕದಾಸ ವೃತ್ತದಲ್ಲಿ ಕನಕದಾಸರ ಫೋಟೊಗೆ ಮಾಲಾರ್ಪಣೆ ನಡೆಯಲಿದೆ. ಬಳಿಕ ರಂಗಮಂದಿರದ ಆವರಣದಲ್ಲಿರುವ ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಉಪನ್ಯಾಸ ಇರುತ್ತದೆ’ ಎಂದು ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಡಿಸಿಪಿ ಚಂದ್ರಶೇಖರ ನೀಲಗಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಹಾಗೂ ಸಮಾಜ ಮುಖಂಡರು ಪಾಲ್ಗೊಂಡಿದ್ದರು.