<p><strong>ಬೆಳಗಾವಿ:</strong> 'ಇಲ್ಲಿ ಬುಧವಾರ ನಡೆಯುತ್ತಿರುವ ಮಹಾನಗರ ಪಾಲಿಕೆ ಪರಿಷತ್ ಸಭೆಯಲ್ಲಿ, 'ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ' ಎಂಬ ನಿರ್ಣಯ ಕೈಗೊಳ್ಳಬೇಕು' ಎಂದು ಒತ್ತಾಯಿಸಿ ಪಾಲಿಕೆಗೆ ಮುತ್ತಿಗೆ ಹಾಕಲು ಯತ್ನಿಸಿದ ಕನ್ನಡ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದರು.</p><p>ಬೆಳಿಗ್ಗೆ 11.30ಕ್ಕೆ ಸಭೆ ನಿಗದಿಯಾಗಿತ್ತು. ಅದಕ್ಕೂ ಮುನ್ನವೇ ಹೋರಾಟಗಾರರು ಪಾಲಿಕೆ ಮುಂದೆ ಸಮಾವೇಶಗೊಂಡು, ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ಆರಂಭಿಸಿದರು.</p><p>ಪ್ರತಿಭಟನಕಾರರ ಬಳಿ ಆಗಮಿಸಿದ ಮೇಯರ್ ಪ್ರೀತಿ ಕಾಮಕರ ಹಾಗೂ ಉಪಮೇಯರ್ ಹನುಮಂತ ಕೊಂಗಾಲಿ ಅವರು, ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳುವುದಾಗಿ ಭರವಸೆ ಕೊಟ್ಟರು.</p><p>ಆದರೂ ಪಟ್ಟು ಸಡಿಲಿಸದ ಹೋರಾಟಗಾರರು ಪ್ರತಿಭಟನೆ ಮುಂದುವರಿಸಿದ್ದಾರೆ.</p><p>ಬಳಿಕ ಸಭೆ ಆರಂಭಗೊಂಡಿದ್ದು, ಕಾಂಗ್ರೆಸ್ ನ ನಾಮನಿರ್ದೇಶಿತ ಸದಸ್ಯರಾದ ರಮೇಶ ಸೊಂಟಕ್ಕಿ, ದಿನೇಶ ನಾಶಿಪುಡಿ, ಕರ್ನಾಟಕದ ಪರ ನಿರ್ಣಯ ಕೈಗೊಳ್ಳುವಂತೆ ಆಗ್ರಹಿಸಿದರು.</p><p>ಆಗ ಮೇಯರ್ ಪ್ರೀತಿ ಕಾಮಕರ, 'ಇಂಥ ನಿರ್ಣಯ ಕೈಗೊಳ್ಳಲು ಅವಕಾಶವಿದೆಯೇ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಪತ್ರ ಬರೆದು ಕೇಳಲಾಗುವುದು. ನಂತರ ಮುಂದಿನ ಕ್ರಮ ವಹಿಸಲಾಗುವುದು' ಎಂದು ತಿಳಿಸಿದರು.</p><p>ಇದಕ್ಕೆ ತೃಪ್ತರಾಗದ ಸದಸ್ಯರು, 'ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗವೆಂದು ನಿರ್ಣಯ ತೆಗೆದುಕೊಳ್ಳಲೇಬೇಕು' ಎಂದು ಪಟ್ಟು ಹಿಡಿದಿದ್ದಾರೆ.</p><p>'ಮೇಯರ್ ಅಡ್ಡ ಗೋಡೆ ದೀಪ ಇಟ್ಟಂತೆ ಮಾತನಾಡಬಾರದು. ಸ್ಪಷ್ಟವಾಗಿ ನಿರ್ಣಯ ತೆಗೆದುಕೊಳ್ಳಬೇಕು' ಎಂದು ಆಗ್ರಹಿಸುತ್ತಿದ್ದಾರೆ.</p><p>ಈ ನಿರ್ಣಯ ತೆಗೆದುಕೊಳ್ಳದಂತೆ ಎಂಇಎಸ್ ಬೆಂಬಲಿತ ಸದಸ್ಯರು ಆಗ್ರಹಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> 'ಇಲ್ಲಿ ಬುಧವಾರ ನಡೆಯುತ್ತಿರುವ ಮಹಾನಗರ ಪಾಲಿಕೆ ಪರಿಷತ್ ಸಭೆಯಲ್ಲಿ, 'ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ' ಎಂಬ ನಿರ್ಣಯ ಕೈಗೊಳ್ಳಬೇಕು' ಎಂದು ಒತ್ತಾಯಿಸಿ ಪಾಲಿಕೆಗೆ ಮುತ್ತಿಗೆ ಹಾಕಲು ಯತ್ನಿಸಿದ ಕನ್ನಡ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದರು.</p><p>ಬೆಳಿಗ್ಗೆ 11.30ಕ್ಕೆ ಸಭೆ ನಿಗದಿಯಾಗಿತ್ತು. ಅದಕ್ಕೂ ಮುನ್ನವೇ ಹೋರಾಟಗಾರರು ಪಾಲಿಕೆ ಮುಂದೆ ಸಮಾವೇಶಗೊಂಡು, ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ಆರಂಭಿಸಿದರು.</p><p>ಪ್ರತಿಭಟನಕಾರರ ಬಳಿ ಆಗಮಿಸಿದ ಮೇಯರ್ ಪ್ರೀತಿ ಕಾಮಕರ ಹಾಗೂ ಉಪಮೇಯರ್ ಹನುಮಂತ ಕೊಂಗಾಲಿ ಅವರು, ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳುವುದಾಗಿ ಭರವಸೆ ಕೊಟ್ಟರು.</p><p>ಆದರೂ ಪಟ್ಟು ಸಡಿಲಿಸದ ಹೋರಾಟಗಾರರು ಪ್ರತಿಭಟನೆ ಮುಂದುವರಿಸಿದ್ದಾರೆ.</p><p>ಬಳಿಕ ಸಭೆ ಆರಂಭಗೊಂಡಿದ್ದು, ಕಾಂಗ್ರೆಸ್ ನ ನಾಮನಿರ್ದೇಶಿತ ಸದಸ್ಯರಾದ ರಮೇಶ ಸೊಂಟಕ್ಕಿ, ದಿನೇಶ ನಾಶಿಪುಡಿ, ಕರ್ನಾಟಕದ ಪರ ನಿರ್ಣಯ ಕೈಗೊಳ್ಳುವಂತೆ ಆಗ್ರಹಿಸಿದರು.</p><p>ಆಗ ಮೇಯರ್ ಪ್ರೀತಿ ಕಾಮಕರ, 'ಇಂಥ ನಿರ್ಣಯ ಕೈಗೊಳ್ಳಲು ಅವಕಾಶವಿದೆಯೇ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಪತ್ರ ಬರೆದು ಕೇಳಲಾಗುವುದು. ನಂತರ ಮುಂದಿನ ಕ್ರಮ ವಹಿಸಲಾಗುವುದು' ಎಂದು ತಿಳಿಸಿದರು.</p><p>ಇದಕ್ಕೆ ತೃಪ್ತರಾಗದ ಸದಸ್ಯರು, 'ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗವೆಂದು ನಿರ್ಣಯ ತೆಗೆದುಕೊಳ್ಳಲೇಬೇಕು' ಎಂದು ಪಟ್ಟು ಹಿಡಿದಿದ್ದಾರೆ.</p><p>'ಮೇಯರ್ ಅಡ್ಡ ಗೋಡೆ ದೀಪ ಇಟ್ಟಂತೆ ಮಾತನಾಡಬಾರದು. ಸ್ಪಷ್ಟವಾಗಿ ನಿರ್ಣಯ ತೆಗೆದುಕೊಳ್ಳಬೇಕು' ಎಂದು ಆಗ್ರಹಿಸುತ್ತಿದ್ದಾರೆ.</p><p>ಈ ನಿರ್ಣಯ ತೆಗೆದುಕೊಳ್ಳದಂತೆ ಎಂಇಎಸ್ ಬೆಂಬಲಿತ ಸದಸ್ಯರು ಆಗ್ರಹಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>