ಬೆಳಗಾವಿ: ನಗರದ ಮಹಾನಗರಪಾಲಿಕೆ ಮುಂಭಾಗ ಕನ್ನಡಪರ ಹೋರಾಟಗಾರರು ಹಾರಿಸಿರುವ ಕನ್ನಡ ಧ್ವಜ ತೆರವುಗೊಳಿಸುವಂತೆ ಒತ್ತಾಯಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್)ಯಿಂದ ಜ. 21ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಮಹಾರಾಷ್ಟ್ರದ ಕೆಲವು ಮುಖಂಡರು ಮತ್ತು ಶಿವಸೇನೆಯ ಕಾರ್ಯಕರ್ತರು ಕೂಡ ಭಾಗವಹಿಸಲಿದ್ದಾರೆ. ಗಡಿ ವಿವಾದ ಕೆದಕಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.