ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಪ್ರಭಾವದಿಂದಾಗಿ ಪಾಲಿಕೆಯಲ್ಲಿ ಕನ್ನಡ ಧ್ವಜ ಇಲ್ಲ. ಅಲ್ಲಿ ಕನ್ನಡ ಧ್ವಜ ಹಾರಿಸುವುದಕ್ಕಾಗಿ ಕಸ್ತೂರಿ ಅನೇಕ ವರ್ಷಗಳಿಂದ ಶಪಥ ಮಾಡಿದ್ದರು. ಅಲ್ಲಿವರೆಗೆ ಪಾದರಕ್ಷೆ ಧರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದರು. ರಾಜ್ಯೋತ್ಸವದ ಅಂಗವಾಗಿ ಮದ್ಯರಾತ್ರಿ ಧ್ವಜ ತಂದು ಹಾರಿಸಿದ್ದಾರೆ. ಇದೇ ಮೊದಲ ಬಾರಿಗೆ ಪಾಲಿಕೆಯಲ್ಲಿ ಕನ್ನಡ ಧ್ವಜ ಹಾರಾಡಿದೆ.