<p><strong>ಬೆಳಗಾವಿ</strong>: ಇಲ್ಲಿನ ಮಹಾನಗರಪಾಲಿಕೆ ಎದುರಿನ ಧ್ವಜಸ್ತಂಭದಲ್ಲಿರುವ ಕನ್ನಡ ಬಾವುಟವನ್ನು ಬದಲಿಸಿ ಹೊಸದನ್ನು ಅಳವಡಿಸಲು ಮುಂದಾದ 10 ಮಂದಿ ಕನ್ನಡ ಹೋರಾಟಗಾರರನ್ನು ಪೊಲೀಸರು ಸೋಮವಾರ ವಶಕ್ಕೆ ಪಡೆದರು.</p>.<p>ಧ್ವಜವನ್ನು ಕನ್ನಡ ಹೋರಾಟಗಾರರೇ ಹೋದ ವರ್ಷದ ಡಿ.28ರಂದು ಸ್ಥಾಪಿಸಿದ್ದರು. ಬಾವುಟದ ಬಣ್ಣ ಮಾಸಿ ಹೋಗಿರುವುದರಿಂದ ಹೊಸದು ಹಾಕಬೇಕು ಎನ್ನುವುದು ಅವರ ಆಗ್ರಹವಾಗಿತ್ತು. ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ತಾವಾಗಿಯೇ ಬಾವುಟದೊಂದಿಗೆ ಬಂದು ಅಳವಡಿಸಲು ಮುಂದಾದರು. ಇದಕ್ಕೆ ಪೊಲೀಸರು ಅವಕಾಶ ಕೊಡದಿದ್ದಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಅವರೊಂದಿಗೆ ವಾಗ್ವಾದ ನಡೆಸಿದರು.</p>.<p>‘ಮೂರು ತಿಂಗಳುಗಳಿಂದ ಮನವಿ ಮಾಡುತ್ತಿದ್ದರೂ ಹೊಸ ಕನ್ನಡ ಬಾವುಟ ಹಾಕುತ್ತಿಲ್ಲ. ಜಿಲ್ಲಾಡಳಿತ ಉದ್ದೇಶಪೂರ್ವಕವಾಗಿಯೇ ಈ ರೀತಿ ನಡೆದುಕೊಳ್ಳುತ್ತಿದೆ’ ಎಂದು ಹೋರಾಟಗಾರರಾದ ಶ್ರೀನಿವಾಸ ತಾಳೂಕರ ಮತ್ತು ವಾಜೀದ ಹಿರೇಕೂಡಿ ದೂರಿದರು.</p>.<p>ಹಗ್ಗ ಹಿಡಿದುಕೊಂಡು ಪ್ರತಿಭಟನೆ ನಡೆಸಿದರು.</p>.<p>ಸ್ಥಳಕ್ಕೆ ಬಂದ ಮಾರ್ಕೆಟ್ ಎಸಿಪಿ ಸದಾಶಿವ ಕಟ್ಟಿಮನಿ, ‘ಹೊಸ ಕನ್ನಡ ಧ್ವಜ ಅಳವಡಿಸಲು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ವಹಿಸಲಾಗುವುದು. ನೀವು ತೆರಳಿರಿ’ ಎಂದು ತಿಳಿಸಿದರು. ಆಗ ಹೋರಾಟಗಾರರು ಅಧಿಕಾರಿ ಜೊತೆ ವಾಗ್ವಾದ ನಡೆಸಿದರು. ಭರವಸೆ ಬೇಡ ಕೂಡಲೇ ಧ್ವಜ ಬದಲಾಯಿಸಬೇಕು ಎಂದು ಪಟ್ಟು ಹಿಡಿದರು. ಇದರಿಂದ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು.</p>.<p>ಮುಂಜಾಗ್ರತಾ ಕ್ರಮವಾಗಿ ಧ್ವಜಸ್ತಂಭ ಸುತ್ತ ಬ್ಯಾರಿಕೇಡ್ಗಳನ್ನು ಇಟ್ಟು, ಪೊಲೀಸ್ ಭದ್ರತೆ ಮುಂದುವರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಇಲ್ಲಿನ ಮಹಾನಗರಪಾಲಿಕೆ ಎದುರಿನ ಧ್ವಜಸ್ತಂಭದಲ್ಲಿರುವ ಕನ್ನಡ ಬಾವುಟವನ್ನು ಬದಲಿಸಿ ಹೊಸದನ್ನು ಅಳವಡಿಸಲು ಮುಂದಾದ 10 ಮಂದಿ ಕನ್ನಡ ಹೋರಾಟಗಾರರನ್ನು ಪೊಲೀಸರು ಸೋಮವಾರ ವಶಕ್ಕೆ ಪಡೆದರು.</p>.<p>ಧ್ವಜವನ್ನು ಕನ್ನಡ ಹೋರಾಟಗಾರರೇ ಹೋದ ವರ್ಷದ ಡಿ.28ರಂದು ಸ್ಥಾಪಿಸಿದ್ದರು. ಬಾವುಟದ ಬಣ್ಣ ಮಾಸಿ ಹೋಗಿರುವುದರಿಂದ ಹೊಸದು ಹಾಕಬೇಕು ಎನ್ನುವುದು ಅವರ ಆಗ್ರಹವಾಗಿತ್ತು. ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ತಾವಾಗಿಯೇ ಬಾವುಟದೊಂದಿಗೆ ಬಂದು ಅಳವಡಿಸಲು ಮುಂದಾದರು. ಇದಕ್ಕೆ ಪೊಲೀಸರು ಅವಕಾಶ ಕೊಡದಿದ್ದಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಅವರೊಂದಿಗೆ ವಾಗ್ವಾದ ನಡೆಸಿದರು.</p>.<p>‘ಮೂರು ತಿಂಗಳುಗಳಿಂದ ಮನವಿ ಮಾಡುತ್ತಿದ್ದರೂ ಹೊಸ ಕನ್ನಡ ಬಾವುಟ ಹಾಕುತ್ತಿಲ್ಲ. ಜಿಲ್ಲಾಡಳಿತ ಉದ್ದೇಶಪೂರ್ವಕವಾಗಿಯೇ ಈ ರೀತಿ ನಡೆದುಕೊಳ್ಳುತ್ತಿದೆ’ ಎಂದು ಹೋರಾಟಗಾರರಾದ ಶ್ರೀನಿವಾಸ ತಾಳೂಕರ ಮತ್ತು ವಾಜೀದ ಹಿರೇಕೂಡಿ ದೂರಿದರು.</p>.<p>ಹಗ್ಗ ಹಿಡಿದುಕೊಂಡು ಪ್ರತಿಭಟನೆ ನಡೆಸಿದರು.</p>.<p>ಸ್ಥಳಕ್ಕೆ ಬಂದ ಮಾರ್ಕೆಟ್ ಎಸಿಪಿ ಸದಾಶಿವ ಕಟ್ಟಿಮನಿ, ‘ಹೊಸ ಕನ್ನಡ ಧ್ವಜ ಅಳವಡಿಸಲು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ವಹಿಸಲಾಗುವುದು. ನೀವು ತೆರಳಿರಿ’ ಎಂದು ತಿಳಿಸಿದರು. ಆಗ ಹೋರಾಟಗಾರರು ಅಧಿಕಾರಿ ಜೊತೆ ವಾಗ್ವಾದ ನಡೆಸಿದರು. ಭರವಸೆ ಬೇಡ ಕೂಡಲೇ ಧ್ವಜ ಬದಲಾಯಿಸಬೇಕು ಎಂದು ಪಟ್ಟು ಹಿಡಿದರು. ಇದರಿಂದ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು.</p>.<p>ಮುಂಜಾಗ್ರತಾ ಕ್ರಮವಾಗಿ ಧ್ವಜಸ್ತಂಭ ಸುತ್ತ ಬ್ಯಾರಿಕೇಡ್ಗಳನ್ನು ಇಟ್ಟು, ಪೊಲೀಸ್ ಭದ್ರತೆ ಮುಂದುವರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>