ಸ್ಥಳಕ್ಕೆ ಬಂದ ಮಾರ್ಕೆಟ್ ಎಸಿಪಿ ಸದಾಶಿವ ಕಟ್ಟಿಮನಿ, ‘ಹೊಸ ಕನ್ನಡ ಧ್ವಜ ಅಳವಡಿಸಲು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ವಹಿಸಲಾಗುವುದು. ನೀವು ತೆರಳಿರಿ’ ಎಂದು ತಿಳಿಸಿದರು. ಆಗ ಹೋರಾಟಗಾರರು ಅಧಿಕಾರಿ ಜೊತೆ ವಾಗ್ವಾದ ನಡೆಸಿದರು. ಭರವಸೆ ಬೇಡ ಕೂಡಲೇ ಧ್ವಜ ಬದಲಾಯಿಸಬೇಕು ಎಂದು ಪಟ್ಟು ಹಿಡಿದರು. ಇದರಿಂದ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು.