ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಥಣಿ ತಾಲ್ಲೂಕಿನಾದ್ಯಂತ ಚುಟುಕುಹಬ್ಬ ಸಂತಸದ ಸಂಗತಿ: ಡಾ ಮಹಾಂತೇಶ ಉಕ್ಕಲಿ

Published 22 ಫೆಬ್ರುವರಿ 2024, 15:45 IST
Last Updated 22 ಫೆಬ್ರುವರಿ 2024, 15:45 IST
ಅಕ್ಷರ ಗಾತ್ರ

ಅಥಣಿ: ‘ತಾಲ್ಲೂಕಿನ‌ ಪ್ರತಿಯೊಂದು ಶಾಲೆಗಳಿಗೆ ತೆರಳಿ ಚುಟುಕುಗೋಷ್ಠಿ ಆಯೋಜಿಸುವ ಮೂಲಕ  ತಾಲ್ಲೂಕಿನಾದ್ಯಂತ ಚುಟುಕುಹಬ್ಬ ಮಾಡುತ್ತಿರುವುದು ಸಂತಸದ ಸಂಗತಿ’ ಎಂದು ಸಾಹಿತಿ ಡಾ ಮಹಾಂತೇಶ ಉಕ್ಕಲಿ  ಹೇಳಿದರು.

ತಾಲ್ಲೂಕಿನ‌ ಕಿರಣಗಿ ಗ್ರಾಮದಲ್ಲಿ ಚುಟುಕು ಸಾಹಿತ್ಯ ಪರಿಷತ್ ಹಾಗೂ ಅಥಣಿ ತಾಲ್ಲೂಕು ಪತ್ರಕರ್ತರ ಸಂಘದ ಸಹಯೋಗದಲ್ಲಿ ಜರುಗಿದ 'ಶಾಲೆಗೊಂದು ಚುಟುಕುಗೋಷ್ಠಿ' ಕಾರ್ಯಕ್ರಮದಲ್ಲಿ ಮಾತನಾಡಿ, ನೂತನ ಕವಿಗಳನ್ನು ಹುಟ್ಟುಹಾಕುವ ಪ್ರಯತ್ನ ಮಾಡಿ ಚುಟುಕು‌ ಸಾಹಿತ್ಯವನ್ನು ಶ್ರೀಮಂತಗೊಳಿಸುವ ಆಯೋಜಕರ ಪ್ರಯತ್ನ ಅಭಿನಂದನಾರ್ಹ ಎಂದರು.

ಯೋಗ ಗುರು ಎಸ್. ಕೆ. ಹೊಳೆಪ್ಪನ್ನವರ ಮಾತನಾಡಿ, ಪ್ರತಿಯೊಂದು ವಿದ್ಯಾರ್ಥಿಗಳು ಸಾಹಿತ್ಯದ ಆಸಕ್ತಿ‌ ಬೆಳೆಸಿಕೊಂಡು ಮುಂಬರುವ ದಿನಮಾನದಲ್ಲಿ ಹೊಸ ಹೊಸ ಕವಿತೆಗಳನ್ನು ರಚನೆ ಮಾಡಬೇಕು, ಈ ಮೂಲಕ ಕನ್ನಡ ಸಾಹಿತ್ಯಕ್ಕೆ ದೊಡ್ಡ ಕೊಡುಗೆ ನೀಡಬೇಕು ಎಂದರು.

ಚುಟುಕು ಸಾಹಿತ್ಯ ಪರಿಷತ್ ಅಥಣಿ ಘಟಕ‌ ಅಧ್ಯಕ್ಷ ಡಾ ಆರ್ ಎಸ್. ದೊಡ್ಡನಿಂಗಪ್ಪಗೋಳ, ಶಿಕ್ಷಕ ವಿಕ್ರಮ ಮೋಘಮೋರೆ, ಅಥಣಿ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಸಂತೋಷ ಬಡಕಂಬಿ, ಚುಟುಕು ಸಾಹಿತ್ಯ ಪರಿಷತ್ ಕಾರ್ಯದರ್ಶಿ ಶಶಿಧರ ಬರ್ಲಿ  ಮಾತನಾಡಿ ಯುವ ಕವಿಗಳಿಗೆ ಚುಟುಕು ಸಾಹಿತ್ಯ ಬಗ್ಗೆ ಮಾರ್ಗದರ್ಶನ ಮಾಡಿದರು.

ಈ ವೇಳೆ ಜಯ ಕರ್ನಾಟಕ‌ ಸಂಘಟನೆಯ ಆಕಾಶ ನಂದಗಾಂವ, ಶಿಕ್ಷಕ ಅಶೋಕ ಡಾಬೋಳಿ, ಚೇತನಕುಮಾರ ಮಾದರ, ಸುನೀಲ ಮಂಗಸೂಳಿ, ಶ್ರೀಕಾಂತ ಸೂರ್ಯವಂಶಿ, ಪತ್ರಕರ್ತರಾದ ಲಕ್ಷ್ಮಣ ಕೋಳಿ, ಸಿದ್ದಾರೂಢ‌ ಬಣ್ಣದ, ಅಬ್ಬಾಸಲಿ ಮುಲ್ಲಾ, ಸುನೀಲ ಮಂಗಸೂಳಿ, ಬಸವರಾಜ ನಂದಗಾಂವ, ಚೇತನ ಸನದಿ, ಗಂಗಾಧರ ತುರಾಯಿ ಇದ್ದರು, ಸುಮಾರು 59 ಜನ ಕವಿಗಳು ಭಾಗವಹಿಸಿದ್ದರು. ಇದರಲ್ಲಿ ಲಕ್ಷ್ಮಣ ಗುರವ ಪ್ರಥಮ, ರೋಹಿಣಿ ಮಡಿವಾಳ ದ್ವಿತೀಯ, ಸಂಗಮೇಶ ಗುರವ ತೃತೀಯ, ದ್ರಾಕ್ಷಾಯಿಣಿ ಮೆಂಡಿಗೇರಿ ಚತುರ್ಥ, ಸರ್ವೇಶ ಗುರವ ಪಂಚಮ, ಸಂಗಮೇಶ ಮಡಿವಾಳ ಹಾಗೂ ಭಾರತಿ ಬಡಿಗೇರ ಸಮಾಧಾನಕರ ಬಹುಮಾನ ಪಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT