12 ಪುಟಗಳ ಲಗ್ನಪತ್ರಿಕೆಯಲ್ಲೂ ಕನ್ನಡತನ ಕಾಣಸಿಕ್ಕಿತು. ಮುಖಪುಟದಲ್ಲಿ ಭುವನೇಶ್ವರಿ ಚಿತ್ರ, ಕನ್ನಡ ನಕ್ಷೆ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರಗಳು, ಕವಿಗಳು, ಶರಣರು, ಸಂತರು, ಚಿತ್ರರಂಗದ ತಾರೆಗಳ ಚಿತ್ರಗಳು ಖುಷಿ ಕೊಟ್ಟವು. ‘ಕನ್ನಡಿಗರ ಮುಂದಿರುವ ಸವಾಲುಗಳು’ ಎಂಬ ವಿಷಯದ ಕುರಿತು ಒಂದು ಪುಟ ಮೀಸಲಿಡಲಾಗಿದೆ.