‘ಈ ವರ್ಷ ಆರ್ಥಿಕ ಮುಗ್ಗಟ್ಟಿನ ಮಧ್ಯೆಯೂ ಕೆಲ ಚಟುವಟಿಕೆಗಳನ್ನು ನಿಭಾಯಿಸಲಾಗಿದೆ. ಸಮ್ಮೇಳನ, ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ, ಕರ್ನಾಟಕ ರಾಜ್ಯೋತ್ಸವ ಆಚರಿಸಲು ಆಗಲಿಲ್ಲ. ಕೇಂದ್ರ ಸಮಿತಿ ಸೂಚಿಸುವವರೆಗೆ ಯಾವುದೇ ಚಟುವಟಿಕೆ ಹಮ್ಮಿಕೊಳ್ಳಬಾರದು. ಒಂದು ವೇಳೆ ಸ್ಥಳೀಯ ಸಂಪನ್ಮೂಲ ಕ್ರೂಢೀಕರಿಸಿ ಜಿಲ್ಲಾ ಹಾಗೂ ತಾಲ್ಲೂಕು ಸಮ್ಮೇಳನಗಳನ್ನು ಮಾಡುವುದಾದರೆ ಅಭ್ಯಂತರವಿಲ್ಲ. ಇದಕ್ಕೆ ಕೇಂದ್ರ ಸಮಿತಿಯಿಂದ ಅನುಮತಿ ಪಡೆಯಬೇಕು’ ಎಂದು ಅವರು ಜಿಲ್ಲಾ ಘಟಕಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.