ಕ್ರಿಯಾ ಸಮಿತಿ ಅಧ್ಯಕ್ಷ ವ.ಚ. ಚೆನ್ನೆಗೌಡ ಮಾತನಾಡಿ, ‘ಉತ್ತರ ಕರ್ನಾಟಕದಲ್ಲಿ ಕಂಡು ಕೇಳರಿಯದ ಪ್ರಮಾಣದಲ್ಲಿ ಪ್ರವಾಹ ಬಂದಿದೆ. ಇದರಿಂದ ಜನರು ಮನೆ–ಮಠಗಳನ್ನು ಕಳೆದುಕೊಂಡು ಸಂತ್ರಸ್ತರಾಗಿದ್ದಾರೆ. ಅವರಿಗೆ ಇಡೀ ರಾಜ್ಯವೇ ಮಿಡಿದಿದೆ. ನಮ್ಮ ಸಂಸ್ಥೆಯಿಂದಲೂ ಸಂತ್ರಸ್ತರಿಗೆ ಸಹಾಯ ಮಾಡಿದ್ದೇವೆ’ ಎಂದು ತಿಳಿಸಿದರು.