<p><strong>ಬೆಳಗಾವಿ: </strong>ಕೊಲ್ಹಾಪುರ, ಸಾಂಗಲಿ, ಸೊಲ್ಲಾಪುರ, ಜತ್ತ, ಉಸ್ಮನಾಬಾದ್, ಲಾತೂರ್ ಪ್ರದೇಶಗಳನ್ನು ಒಳಗೊಂಡಂತೆ ಕರ್ನಾಟಕದ ಹೊಸ ನಕಾಶೆ ಸಿದ್ಧಪಡಿಸಿದ ಅಲ್ಲಿನ ಕನ್ನಡಿಗರು, ಶನಿವಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಅಭಿಯಾನ ಆರಂಭಿಸಿದ್ದಾರೆ.</p>.<p>ಮರಾಠಿಗರ ‘ಝಾಲಾಚ್ ಪಾಹಿಜೆ (ಆಗಲೇ ಬೇಕು)’ ಘೋಷಣೆಗೆ ಪ್ರತ್ಯುತ್ತರವಾಗಿ ಕನ್ನಡಿಗರೂ ಈ ಅಭಿಯಾನ ಆರಂಭಿಸಿ, ತಿರುಗೇಟು ನೀಡಿದ್ದಾರೆ. ಹೊಸ ನಕಾಶೆ ಹರಿಬಿಟ್ಟು ‘ನಮ್ಮನ್ನು ಕರ್ನಾಟಕಕ್ಕೆ ಸೇರಿಸಿ’ ಎಂದು ಗಟ್ಟಿ ಕೂಗು ಹಾಕಿದ್ದಾರೆ.</p>.<p>ಬೆಳಗಾವಿ, ಬೀದರ್, ಭಾಲ್ಕಿ, ನಿಪ್ಪಾಣಿ ಮಹಾರಾಷ್ಟ್ರಕ್ಕೆ ಸೇರಲೇಬೇಕು ಎಂದು ಆರು ದಶಕಗಳಿಂದ ಎಂಇಎಸ್, ಶಿವಸೇನೆ ಕಾರ್ಯಕರ್ತರು ಹೋರಾಟ ನಡೆಸಿದ್ದಾರೆ. ಇದಕ್ಕೆ ಸೆಡ್ಡು ಹೊಡೆದ ಅಲ್ಲಿನ ಕನ್ನಡಿಗರು ಕೂಡ, ಮಹಾರಾಷ್ಟ್ರದ ಐದು ಪ್ರಮುಖ ಜಿಲ್ಲೆಗಳಲ್ಲಿ ಕನ್ನಡಿಗರಿದ್ದು ಅವುಗಳನ್ನು ಕರ್ನಾಟಕಕ್ಕೆ ಸೇರಿಸಬೇಕು ಎಂಬ ಅಭಿಯಾನ ಆರಂಭಿಸಿದ್ದಾರೆ.</p>.<p>ಶನಿವಾರ ಇಡೀ ದಿನ ಈ ನಕಾಶೆ ವಾಟ್ಸ್ಆ್ಯಪ್, ಫೇಸ್ಬುಕ್, ಇನ್ಸ್ಟಾಗ್ರಾಂಗಳಲ್ಲಿ ಹರಿದಾಡಿತು. ಕನ್ನಡಿಗರೇ ಹೆಚ್ಚಾಗಿರುವ ಜತ್ತ ತಾಲ್ಲೂಕು ಕರ್ನಾಟಕದಲ್ಲಿ ಸೇರ್ಪಡೆ ಮಾಡುವಂತೆ ಅಲ್ಲಿನ ಕನ್ನಡಿಗರು ಒತ್ತಾಯಿಸಿದ್ದಾರೆ.</p>.<p><strong>ಉದ್ಧವ್ ಠಾಕ್ರೆ ಆರೋಪ</strong></p>.<p>ಮುಂಬೈ: ‘ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿರುವ ಕಾರಣ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗಡಿ ವಿವಾದವನ್ನು ಕೆದಕಿದ್ದಾರೆ’ ಎಂದು ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ಆರೋಪಿಸಿದ್ದಾರೆ.</p>.<p>ಗಡಿ ವಿವಾದ ಹಾಗೂ ಛತ್ರಪತಿ ಶಿವಾಜಿ ಮಹಾರಾಜ್ ಅವರಿಗೆ ಅವಮಾನಿಸಿದ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರ ಹೇಳಿಕೆ ಕುರಿತು ಶಿಂದೆ ಮೌನವಹಿಸಿದ್ದಾರೆ ಎಂದು ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಕೊಲ್ಹಾಪುರ, ಸಾಂಗಲಿ, ಸೊಲ್ಲಾಪುರ, ಜತ್ತ, ಉಸ್ಮನಾಬಾದ್, ಲಾತೂರ್ ಪ್ರದೇಶಗಳನ್ನು ಒಳಗೊಂಡಂತೆ ಕರ್ನಾಟಕದ ಹೊಸ ನಕಾಶೆ ಸಿದ್ಧಪಡಿಸಿದ ಅಲ್ಲಿನ ಕನ್ನಡಿಗರು, ಶನಿವಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಅಭಿಯಾನ ಆರಂಭಿಸಿದ್ದಾರೆ.</p>.<p>ಮರಾಠಿಗರ ‘ಝಾಲಾಚ್ ಪಾಹಿಜೆ (ಆಗಲೇ ಬೇಕು)’ ಘೋಷಣೆಗೆ ಪ್ರತ್ಯುತ್ತರವಾಗಿ ಕನ್ನಡಿಗರೂ ಈ ಅಭಿಯಾನ ಆರಂಭಿಸಿ, ತಿರುಗೇಟು ನೀಡಿದ್ದಾರೆ. ಹೊಸ ನಕಾಶೆ ಹರಿಬಿಟ್ಟು ‘ನಮ್ಮನ್ನು ಕರ್ನಾಟಕಕ್ಕೆ ಸೇರಿಸಿ’ ಎಂದು ಗಟ್ಟಿ ಕೂಗು ಹಾಕಿದ್ದಾರೆ.</p>.<p>ಬೆಳಗಾವಿ, ಬೀದರ್, ಭಾಲ್ಕಿ, ನಿಪ್ಪಾಣಿ ಮಹಾರಾಷ್ಟ್ರಕ್ಕೆ ಸೇರಲೇಬೇಕು ಎಂದು ಆರು ದಶಕಗಳಿಂದ ಎಂಇಎಸ್, ಶಿವಸೇನೆ ಕಾರ್ಯಕರ್ತರು ಹೋರಾಟ ನಡೆಸಿದ್ದಾರೆ. ಇದಕ್ಕೆ ಸೆಡ್ಡು ಹೊಡೆದ ಅಲ್ಲಿನ ಕನ್ನಡಿಗರು ಕೂಡ, ಮಹಾರಾಷ್ಟ್ರದ ಐದು ಪ್ರಮುಖ ಜಿಲ್ಲೆಗಳಲ್ಲಿ ಕನ್ನಡಿಗರಿದ್ದು ಅವುಗಳನ್ನು ಕರ್ನಾಟಕಕ್ಕೆ ಸೇರಿಸಬೇಕು ಎಂಬ ಅಭಿಯಾನ ಆರಂಭಿಸಿದ್ದಾರೆ.</p>.<p>ಶನಿವಾರ ಇಡೀ ದಿನ ಈ ನಕಾಶೆ ವಾಟ್ಸ್ಆ್ಯಪ್, ಫೇಸ್ಬುಕ್, ಇನ್ಸ್ಟಾಗ್ರಾಂಗಳಲ್ಲಿ ಹರಿದಾಡಿತು. ಕನ್ನಡಿಗರೇ ಹೆಚ್ಚಾಗಿರುವ ಜತ್ತ ತಾಲ್ಲೂಕು ಕರ್ನಾಟಕದಲ್ಲಿ ಸೇರ್ಪಡೆ ಮಾಡುವಂತೆ ಅಲ್ಲಿನ ಕನ್ನಡಿಗರು ಒತ್ತಾಯಿಸಿದ್ದಾರೆ.</p>.<p><strong>ಉದ್ಧವ್ ಠಾಕ್ರೆ ಆರೋಪ</strong></p>.<p>ಮುಂಬೈ: ‘ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿರುವ ಕಾರಣ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗಡಿ ವಿವಾದವನ್ನು ಕೆದಕಿದ್ದಾರೆ’ ಎಂದು ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ಆರೋಪಿಸಿದ್ದಾರೆ.</p>.<p>ಗಡಿ ವಿವಾದ ಹಾಗೂ ಛತ್ರಪತಿ ಶಿವಾಜಿ ಮಹಾರಾಜ್ ಅವರಿಗೆ ಅವಮಾನಿಸಿದ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರ ಹೇಳಿಕೆ ಕುರಿತು ಶಿಂದೆ ಮೌನವಹಿಸಿದ್ದಾರೆ ಎಂದು ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>