‘ಆರ್ಎಸ್ಎಸ್ನವರು ದೇಶಭಕ್ತರು. ಬೇರೆ ರೀತಿ ಕಳಂಕ ಹಚ್ಚಲು ಪ್ರಯತ್ನಿಸಿದರೆ ಅದು ಸಫಲವಾಗುವುದಿಲ್ಲ. ದೇಶದಾದ್ಯಂತ ಯುವಜನರಲ್ಲಿ ರಾಷ್ಟ್ರಪ್ರೇಮ ಬೆಳೆಸುವ ಕಾರ್ಯದಲ್ಲಿ ಆರ್ಎಸ್ಎಸ್ ತೊಡಗಿದೆ. ಭಾರತೀಯ ಸಂಸ್ಕೃತಿಯಂತೆ ನಮ್ಮ ಯುವಕರು ಬದುಕಬೇಕು ಎಂಬ ಉದ್ದೇಶದಿಂದ ಸಾಕಷ್ಟು ಪ್ರಯತ್ನ ಮಾಡುತ್ತಿದೆ. ಕೇಶವಕೃಪದಲ್ಲಿ ಯಾವ್ಯಾವ ಜಾತಿಯವರು ಇದ್ದಾರೆ ಎನ್ನುವುದು ಯಾರಿಗೂ ಗೊತ್ತಿಲ್ಲ. ಅಲ್ಲಿ ಜಾತಿ, ಧರ್ಮ, ಮತ, ಪಂಥ, ಬಡವ-ಬಲ್ಲಿದ ಎಂಬ ಯಾವುದೇ ತಾರತಮ್ಯವಿಲ್ಲ. ದೇಶಕ್ಕಾಗಿ ಪ್ರಾಣ ಬಲಿ ಕೊಟ್ಟ ದೇಶಭಕ್ತರ ಸಂಸ್ಥೆಯದು’ ಎಂದು ಸಮರ್ಥಿಸಿಕೊಂಡರು.